ಆನೇಕಲ್:ನಾರಾಯಣ ಹೆಲ್ತ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ

Source: so english | By Arshad Koppa | Published on 19th August 2017, 8:07 AM | State News | Guest Editorial |

ಆನೇಕಲ್: ನಾರಾಯಣ ಹೆಲ್ತ್ ತನ್ನ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಲಿಟಿ (ಸಿಎಸ್‍ಆರ್) ವತಿಯಿಂದ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ, ಸಮಸ್ಯೆ ಬರದಂತೆ ತಡೆಗಟ್ಟುವ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿತ್ತು. 

ತರಬೇತಿ ಪಡೆದ ಸಮುದಾಯ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರು, ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆಯನ್ನು ನಡೆಸಿದರು. ಸುಮಾರು 350 ಅಂಗನವಾಡಿ ಕಾರ್ಯಕರ್ತೆಯರು ತಪಾಸಣೆಗೆ ಒಳಗಾದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ನಾರಾಯಣ ಹೆಲ್ತ್  ಮೊಬೈಲ್ ಮ್ಯಾಮೊಗ್ರಫಿ ಸೇವೆಗೆ 55 ಅಂಗನವಾಡಿ ಕಾರ್ಯಕರ್ತೆಯರು ಒಳಪಟ್ಟರು. ತಪಾಸಣೆಗೆ ಒಳಗಾದ ಮಹಿಳೆಯರಲ್ಲಿ ಕೆಲವರಿಗೆ ಹೆಚ್ಚಿನ ರೋಗ ತಪಾಸಣೆ/ ಚಿಕಿತ್ಸೆಗೆ ಶಿಫಾರಸ್ಸು ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡಿದ್ದ ಈ ಜಾಗೃತಿ ಕಾರ್ಯಕ್ರಮವು, ಆನೇಕಲ್ ತಾಲ್ಲೂಕಿನ ಜನಸಾಮಾನ್ಯರಲ್ಲಿ ಪರಿಣಾಮಕಾರಿಯಾದ ತಿಳಿವಳಿಕೆ ಮೂಡಿಸಲು ನೆರವಾಯಿತು.
 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...