ನಾಡು, ಗಡಿ ಹಾಗೂ ಭಾಷೆ ಮೀರಿದ ರಾಜ್ಯ ಸರ್ಕಾರದ ಅನ್ನ ದಾಸೋಹ

Source: sonews | By Staff Correspondent | Published on 10th April 2020, 7:59 PM | State News | Special Report |

ವಿಶೇಷ ಲೇಖನ : ಲಾಕ್‍ಡೌನ್‍ನ ಒಂದು ಅವಲೋಕನ

ಬೆಂಗಳೂರು:ತುತ್ತು ಅನ್ನಕ್ಕಾಗಿ ಸಾವಿರಾರು ಕಿ.ಮೀ. ದೂರದ ಊರುಗಳಿಂದ ಬಂದು ಕರ್ನಾಟಕ ರಾಜ್ಯದಲ್ಲಿ, ಅದರಲ್ಲೂ ರಾಜ್ಯದ ರಾಜಧಾನಿಯಲ್ಲಿ ನೆಲೆಸಿರುವ ಕೂಲಿ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರು, ಕೋವಿಡ್-19ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್‍ಡೌನ್‍ ನಿಂದ ಕಂಗಾಲಾಗಿದ್ದಾರೆ.                              

ಇಂತಹ ಕಂಗೆಟ್ಟ ಜನರಿಗಾಗಿ ರಾಜ್ಯ ಸರ್ಕಾರವು ಪ್ರಾರಂಭಿಸಿರುವ “ದಾಸೋಹ” ಹೆಸರಿನ  ಅನ್ನದಾನ ಕಾರ್ಯಕ್ರಮ ವಿಶೇಷವಾಗಿ ವಲಸೆ ಕಾರ್ಮಿಕರಿಗೆ ವರದಾನವಾಗಿದೆ.

ಹಂಗರ್ ಹೆಲ್ಪ್‍ಲೈನ್ ಎಂದೇ ಜನಪ್ರಿಯವಾಗಿರುವ ದಾಸೋಹದ ಶುಲ್ಕ-ರಹಿತ ಸಹಾಯವಾಣಿ 155214 ಗೆ ಬೆಂಗಳೂರು ಮಹಾ ನಗರದ ಯಾವುದೇ ಮೂಲೆಯಲ್ಲಿ ಆಹಾರವಿಲ್ಲದೆ ಬಳಲುತ್ತಿರುವ ಕಟ್ಟಡ ಕಾರ್ಮಿಕರು ಅಥವಾ ವಲಸೆ ಕಾರ್ಮಿಕರು ಸಂಪರ್ಕಿಸಿದಲ್ಲಿ ಅವರ ವಿಳಾಸವನ್ನು ಖಚಿತಪಡಿಸಿಕೊಂಡು, ಎಷ್ಟು ಮಂದಿ ಇದ್ದಾರೆ ? ಎಷ್ಟು ಊಟದ ಅಗತ್ಯವಿದೆ ? ಎಷ್ಟು ದಿನಗಳು  ಊಟದ ಅವಶ್ಯಕತೆ ಇದೆ ? ಎಂಬ ಅಂಶಗಳನ್ನು ಕಲೆ ಹಾಕಿ, ಖಾಸಗಿ ಹಾಗೂ ನೋಂದಾಯಿತ ಸ್ವಯಂ ಸೇವಕರ ಮೂಲಕ ಆ ಜನರಿಗೆ ಅವರಿದ್ದಲ್ಲೇ ಊಟ ದೊರಕಿಸಿಕೊಡುವ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದೆ. ಈ ಪವಿತ್ರ ಕಾರ್ಯಕ್ರಮದಲ್ಲಿ ನಾಗರೀಕ ರಕ್ಷಣಾ ದಳ ( ಸಿವಿಲ್ ಡಿಫೆನ್ಸ್ ) ಹಾಗೂ ಗೃಹ ರಕ್ಷಕ ದಳ ( ಹೋಂ ಗಾಡ್ರ್ಸ್ ) ಕೂಡಾ ಕಾರ್ಮಿಕ ಇಲಾಖೆಯ ಬೆಂಬಲಕ್ಕೆ ಬೆನ್ನೆಲುಬಾಗಿ ನಿಂತಿದೆ. ಇದೀಗ, ಈ ವ್ಯವಸ್ಥೆಯು ರಾಜ್ಯದ ಎಲ್ಲಾ ಪ್ರಮುಖ ನಗರಿಗಳೂ ಹಾಗೂ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ.  

ಪ್ರತಿ ದಿನ ಕಾರ್ಮಿಕ ಇಲಾಖೆಯ ಮೂಲಕ ವಿವಿಧ ಕಾರ್ಮಿಕ ಸಂಘಗಳು ಮತ್ತು ಸಂಘಟನೆಗಳ  ಸಹಭಾಗಿತ್ವದಲ್ಲಿ ಲಕ್ಷಾಂತರ ಬಡ ಕಾರ್ಮಿಕರಿಗೆ ದಿನಕ್ಕೆ ಎರಡು ಬಾರಿ ಶುಚಿ ಮತ್ತು ರುಚಿಯಾದ ಊಟವನ್ನು ನೀಡಲಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ದಾನಿಗಳನ್ನೂ ಸಂಪರ್ಕಿಸಿ ಬಾಣಸಿಗರ ಪಡೆಯಿಂದ ಆಹಾರವನ್ನು ತಯಾರಿಸಿ, ಅದನ್ನು ಪೊಟ್ಟಣಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆಹಾರ ವಿತರಣೆಯಲ್ಲಿಯೂ ಕೂಡಾ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗುತ್ತಿದೆ.

ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಕಾರ್ಮಿಕ ಸಂಘಟನೆಗಳು ಹಾಗೂ ಪ್ರಮುಖ ಕಾರ್ಮಿಕ ಮುಖಂಡರೂ ಈ ಕಾರ್ಯದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗಮನಾರ್ಹ ಅಂಶ ಎಂದರೆ,   ರಾಜ್ಯ ಸರ್ಕಾರ ಕಳುಹಿಸಿಕೊಟ್ಟ ಆಹಾರವನ್ನು ಗುರುತಿಸಲ್ಪಟ್ಟ ಪ್ರದೇಶಗಳಲ್ಲಿ ಅದರಲ್ಲೂ ಸಂಕಷ್ಟದಲ್ಲಿರುವ ಕಾರ್ಮಿಕರು ಇರುವಡೆಗೆ ತಮ್ಮ ಸ್ವಂತದ ವಾಹನಗಳಲ್ಲಿಯೇ ಸಾಗಿಸಿ ವಿತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.  

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿರುವ ದೊಡ್ಡ ನಾಗಮಂಗಲ ಪ್ರದೇಶದಲ್ಲಿ ಉಳಿದು ಕೊಂಡಿರುವ ಹೊರ ರಾಜ್ಯದ ಸಾವಿರಾರು ಕಾರ್ಮಿಕರು ದಾಸೋಹ ಯೋಜನೆಯ ಆಹಾರದ ಪೊಟ್ಟಣಗಳನ್ನು ಸ್ವೀಕರಿಸಿದ ಸಂದರ್ಭದಲ್ಲಿ ಅಲ್ಲಿನ ಕಾರ್ಮಿಕರು ಕರ್ನಾಟಕ ಸರ್ಕಾರಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿ, ಮನದುಂಬಿ ಮಾತನಾಡಿದ ಕ್ಷಣ ಮಾನವೀಯತೆಯ ಪರಾಕಾಷ್ಠೆಯನ್ನು ಹೊರಹೊಮ್ಮಿಸುವಂತಿತ್ತು.

ಇದೇ ಪ್ರದೇಶದ ವಾರ್ಡ್ ನಂಬರ್ 191 ರಲ್ಲಿ ದಿನಕ್ಕೆ ಎರಡು ಬಾರಿ ಮೂರು ಸಾವಿರಕ್ಕೂ ಹೆಚ್ಚಿನ ಜನರಿಗೆ ಸರ್ಕಾರದ ದಾಸೋಹ ಯೋಜನೆಯಡಿ ಆಹಾರವನ್ನು ಒದಗಿಸಲಾಗುತ್ತಿದೆ.             

ಅಲ್ಲಿನ ಕಾರ್ಮಿಕ ಮುಖಂಡ ಪ್ರದೀಪ್ ಅವರು ಮಾತನಾಡಿ ರಾಜ್ಯ ಸರ್ಕಾರದ ಈ ಕ್ರಮದಿಂದ ಕಟ್ಟಡ ಕಾರ್ಮಿಕರಲ್ಲಿ ತಮ್ಮನ್ನು ಕಾಪಾಡುವ ಸರ್ಕಾರವಿದೆ ಎಂಬ ಕೃತಜ್ಞತಾ ಭಾವ ಇದೆ ಎಂದು ತಿಳಿಸಿ ರಾಜ್ಯ ಸರ್ಕಾರದ ದಾಸೋಹ ಕಾರ್ಯಕ್ರಮಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಅಂತೆಯೇ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೂ ಕೂಡಾ ಕೋವಿಡ್ ವಾರಿಯರ್ಸ್ ಎಂಬ ಹೆಸರಿನಲ್ಲಿ ಕೋವಿಡ್ ಸೇನಾನಿಗಳ ಬೃಹತ್ ಪಡೆಯನ್ನೇ ರಚಿಸಿದೆ.                     

ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಯಂ ಸೇವಕರನ್ನು ನೇಮಿಸಿಕೊಂಡಿದ್ದು, ಮುಖ್ಯವಾಗಿ ಲಾಕ್‍ಡೌನ್‍ನಿಂದ ಕಷ್ಟ-ಸಂಕಷ್ಟಕ್ಕೆ ಸಿಲುಕಿರುವ ಎಲ್ಲಾ ವರ್ಗದ ಜನರಿಗೆ ಟೆಲಿಗ್ರಾಂ ಆಪ್ ಮೂಲಕ ಸಕಾಲಿಕ   ಹಾಗೂ ಸೂಕ್ತ ಸಲಹೆಗಳನ್ನು ನೀಡುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಈ ಟೆಲಿಗ್ರಾಂ ಗುಂಪಿಗೆ 22,000 ಕ್ಕೂ ಹೆಚ್ಚು ಸದಸ್ಯರು ಸೇರ್ಪಡೆಯಾಗಿದ್ದಾರೆ.                   

ಯಾವುದೇ ಸಮಯದಲ್ಲಿ ನೋಡಿದರೂ ಗುಂಪಿನ ಶೇಕಡಾ 10 ರಷ್ಟು ಮಂದಿ ಆನ್‍ಲೈನ್ ನಲ್ಲಿ ವಿಚಾರ ವಿನಿಮಯವನ್ನು ವೀಕ್ಷಿಸುತ್ತಿರುತ್ತಾರೆ. ದಿನದ 24 ಗಂಟೆ ಹಾಗೂ ವಾರದ ಏಳೂ ದಿನಗಳು ಒಂದು ನೂರಕ್ಕೂ ಹೆಚ್ಚು ಅನುಭವೀ ಅಧಿಕಾರಿಗಳು, ತಜ್ಞ ವೈದ್ಯರು ಮತ್ತು ಸ್ವಯಂ ಸೇವಕರು  ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಒಂದೇ ಮಾತಿನಲ್ಲಿ ಬಣ್ಣಿಸಬಹುದಾದರೆ, ಕೊರೊನಾ ವೈರಸ್-19 ರ ಮಹಾಮಾರಿಯಿಂದ ಘೋಷಿಸಲ್ಪಟ್ಟಿರುವ ಈ ಲಾಕ್‍ಡೌನ್ 2020 ರಲ್ಲಿ ನಮ್ಮೆಲ್ಲರನ್ನೂ ಮಾನವೀಯತೆಯ ಬಾಂಧವ್ಯವನ್ನು ಬೆಸೆಯುವ ವಿಶೇಷ ವೇದಿಕೆಯಾಗಿ ರೂಪುಗೊಳ್ಳುತ್ತಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...