ದೇಶದ ಸವೋಚ್ಚ ತೀರ್ಪು ಪ್ರಕಟ; ಬಾಬರಿ ಮಸೀದಿ ಒಡೆತನ ರಾಮಲಲ್ಲನಿಗೆ ಸೇರಿದ್ದು

Source: sonews | By Staff Correspondent | Published on 9th November 2019, 2:03 PM | National News | Don't Miss |

ನವದೆಹಲಿ: ಸರ್ವೊಚ್ಚ ನ್ಯಾಯಾಲಯದಿಂದ ದಶಕಗಳಿಂದ ಜನರ ನಿದ್ದೆಗೆಡಿಸಿದ್ದ ಬಾಬರಿ ಮಸೀದಿ ಆಸ್ತಿ ಹಕ್ಕು ತೀರ್ಪು ಹೊರಬಿದ್ದಿದ್ದು ನ್ಯಾಯಾಲಯವು ಸರಕಾರಕ್ಕೆ ಮೂರು ತಿಂಗಳಲ್ಲಿ ಟ್ರಸ್ಟ್ ರಚಿಸಿ ಅದಕ್ಕೆ ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಕೊಡಬೇಕು. ಮತ್ತು ಸರಕಾರ ಅಲ್ಲಿ ಮಂದಿರ ನಿರ್ಮಾಣ ಮಾಡಬೇಕೆಂದು ಮಹತ್ವದ ಆದೇಶ ನೀಡಿದೆ.ಮಾಲಿಕತ್ವ ರಾಮಲಲ್ಲನಿಗೆ ಸಲ್ಲುತ್ತದೆ ಎಂದು ಹೇಳಿದೆ.

ಅದರೊಂದಿಗೆ ಸುನ್ನಿ ವಕ್ಫ್ ಬೋರ್ಡ್ ಗೆ ಅಯೋಧ್ಯೆಯಲ್ಲೇ ಸೂಕ್ತ ಐದು ಎಕರೆ ಪರ್ಯಾಯ ಜಾಗವನ್ನು ನೀಡಬೇಕೆಂದು ನ್ಯಾ. ರಂಜನ್ ಗೋಗಯ್ ನೇತೃತ್ವದ ಐದು ಜನರ ನ್ಯಾಯಪೀಠ ಆದೇಶಿಸಿದೆ.

ಮುಂಚೆ ನಿರ್ಮೊಹಿ ಅಖಾಡ ಮತ್ತು ಶಿಯಾ ವಕ್ಫ್ ಬೋರ್ಡಿನ ಅರ್ಜಿಯನ್ನು ವಜಾಗೊಳಿಸಿ ಸರ್ವೊಚ್ಚ ನ್ಯಾಯಾಲಯ ಆದೇಶ ನೀಡಿದೆ. ಅದರೊಂದಿಗೆ ನಿರ್ಮೋಹಿ ಅಖಾಡಕ್ಕೆ ಟ್ರಸ್ಟ್ ನಲ್ಲಿ ಸ್ಥಾನ ನೀಡುವ ಬಗ್ಗೆ ಸರಕಾರಕ್ಕೆ ನಿರ್ದೇಶನ ನೀಡಿದೆ.

ಆದೇಶ ನೀಡುವ ಮುನ್ನ ಹಲವಾರು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಾಣವಾಗಿರಲಿಲ್ಲ ಎಂಬ ಅಂಶವನ್ನು ಎತ್ತಿ ಹಿಡಿದಿತ್ತು. ಮಸೀದಿಯ ಅಡಿಪಾಯದ ಕೆಳಗೆ ವಿಶಾಲ ರಚನೆಯಿತ್ತು. ಉತ್ಖನದ ಸಂದರ್ಭದಲ್ಲಿ ಅದು ಮುಸ್ಲಿಮ್ ರಚನೆಯಾಗಿರಲಿಲ್ಲ ಎಂಬ ಅಂಶ ಕೂಡ ತೀರ್ಪಿನಲ್ಲಿ ತಿಳಿಸಿದ್ದಾರೆ. ತೀರ್ಪಿಗಾಗಿ ಪುರಾತತ್ವ ಇಲಾಖೆಯ ಸಾಕ್ಷ್ಯವನ್ನು ಪರಿಗಣಿಸಲಾಗಿದೆಯೆಂದು ಸರ್ವೊಚ್ಚ ನ್ಯಾಯಾಲಯ ತಿಳಿಸಿದೆ.

ಅದರೊಂದಿಗೆ 1949 ರಲ್ಲಿ ಮಸೀದಿಯಲ್ಲಿ ಮೂರ್ತಿ ತಂದು ಇಟ್ಟಿದ್ದು ಕಾನೂನು ಬಾಹಿರ ಮತ್ತು ಮಸೀದಿಯ ಧ್ವಂಸ ನಡೆಸಿದ್ದು ಕೂಡ ಕಾನೂನಿನ ಉಲ್ಲಂಘನೆಯೆಂದು ಸರ್ವೊಚ್ಚ ನ್ಯಾಯಾಲಯ ತಿಳಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...