ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

Source: S.O. News Service | Published on 3rd August 2019, 8:07 PM | National News | Don't Miss |

ನವದೆಹಲಿ: ಪುಲ್ವಾಮಾ ದಾಳಿ ಬಳಿಕ ನಡೆದ ಏರ್ ಸರ್ಜಿಕಲ್ ಸ್ಟ್ರೈಕ್ ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರನನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿತ್ತು. ಆದಾದ ಬಳಿಕ ಭಾರತ ಮತ್ತೊಂದು ಬಹುದೊಡ್ಡ ದಾಳಿಯನ್ನು ಉಗ್ರರ ನೆಲೆಗಳ ಮೇಲೆ ನಡೆಸಿದೆ.

ಪಾಕ್ ಆಕ್ರಮಿತ ಗಡಿ ಪ್ರದೇಶ 30 ಕಿಮೀ ಒಳ ಭಾಗದಲ್ಲಿ ನಿರ್ಮಿಸಲಾಗಿದ್ದ ಉಗ್ರರ ತರಬೇತಿ ಕೇಂದ್ರಗಳನ್ನು ಗುರಿಯಾಗಿಕೊಂಡು ದಾಳಿ ನಡೆಸಲಾಗಿದೆ. ಈ ಹಿಂದೆ ಪಾಕ್ ಆಕ್ರಮಿತ ಪ್ರದೇಶಕ್ಕೆ ನುಗ್ಗಿ ಸೈನಿಕರು ದಾಳಿ ನಡೆಸಿದ್ದರು. ಆದರೆ ಈ ಬಾರಿ ಆರ್ಟಿಲರಿ ಗನ್ ಮೂಲಕ ಬಾಂಬ್ ದಾಳಿ ನಡೆಸಲಾಗಿದೆ. ಗುಪ್ತಚರ ಇಲಾಖೆ ನೀಡಿರುವ ಖಚಿತ ಮಾಹಿತಿ ಮೇಲೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಕುರಿತು ಯಾವುದೇ ಮಾಹಿತಿ ಅಧಿಕೃತವಾಗಿ ಭಾರತ ಸೇನೆ ನೀಡಿಲ್ಲ.
ಜಮ್ಮು ಕಾಶ್ಮೀರದ ನೀಲಂ ಜೇಲಂ ಪ್ರಾಜೆಕ್ಟ್ ಬಳಿ ನಿಖರ ದಾಳಿ ನಡೆಸಲಾಗಿದೆ. ಈ ಹಿಂದೆ ನಡೆದಿದ್ದ ಎಲ್ಲಾ ದಾಳಿಗಳಿಗಿಂತಲೂ ಈ ದಾಳಿ ಭಿನ್ನವಾಗಿದೆ. ಆದರೆ ಘಟನೆಯಲ್ಲಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿಲ್ಲ. ನೀಲಂ ಜೇಲಂ ಪ್ರಾಜೆಕ್ಟ್ ಪಾಕಿಸ್ತಾನ ಕೈಗೊಳ್ಳುತ್ತಿರುವ ಜಲ ವಿದ್ಯುತ್ ಯೋಜನ ಇದಾಗಿದ್ದು, ಈ ದಾಳಿಯಿಂದ ಯೋಜನೆಗೆ ಹಾನಿಯಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿಯನ್ನು ಮಾಡಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಸತತ 1 ವಾರಗಳ ಕಾಲ ಸಿದ್ಧತೆ ನಡೆಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಕಾಶ್ಮೀರಕ್ಕೆ ಹೆಚ್ಚುವರಿ ಸೈನ್ಯವನ್ನು ರವಾನೆ ಮಾಡಲಾಗಿತ್ತು. ಆದರೆ ಈ ದಾಳಿ ಬಗ್ಗೆ ಭಾರತ ಸೇನೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಈ ಮೂಲಕ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ಈ ದಾಳಿಯ ಹಿನ್ನೆಲೆಯೇ ಅಮರನಾಥ ಯಾತ್ರೆಗೆ ತೆರಳಿದ್ದ ಭಕ್ತರಿಗೆ ತಡೆ ನೀಡಿ ವಾಪಸ್ ಕಳುಹಿಸಲಾಗಿತ್ತು. ಈ ದಾಳಿಯಿಂದ ಮುಂದೇ ಬರಬಹುದಾದ ಸವಾಲುಗಳನ್ನ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...