ಕಾರ್ಮಿಕರಿಗೆ ಘೋಷಿಸಿದ ಆರ್ಥಿಕ ಧನಸಹಾಯ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

Source: sonews | By Staff Correspondent | Published on 29th July 2020, 4:24 PM | Coastal News |

ಶಿರಸಿ: ಪ್ರಸಕ್ತ ವರ್ಷದ ಪ್ರಾರಂಭದಲ್ಲಿ ಕೋರೋನಾ ಕೋವಿಡ್-19 ಸಂದರ್ಭದಲ್ಲಿ ಕಾರ್ಮಿಕರಿಗೆ ಆರ್ಥೀಕ ಸಹಾಯ ನೀಡುವ ಉದ್ದೇಶದಿಂದ ರಾಜ್ಯ ಸರಕಾರವು ಪ್ರತಿ ಕಾರ್ಮಿಕರಿಗೂ ರೂಪಾಯಿ 5 ಸಾವಿರ ನೀಡಲು ನಿರ್ಧರಿಸಿದ್ದು, ಸರಕಾರ ಘೋಷಣೆ ಮಾಡಿ 4 ತಿಂಗಳಾದರೂ ಶಿರಸಿ ತಾಲೂಕಿನಲ್ಲಿ ಸಾವಿರಾರು ಕಾರ್ಮಿಕರಿಗೆ ಆರ್ಥೀಕ ಸಹಾಯಧನ ಇಂದಿನವರೆಗೂ ತಲುಪದೇ ಇರುವುದರಿಂದ ಅತೀ ಶೀಘ್ರದಲ್ಲಿ ಆರ್ಥೀಕ ಸಹಾಯ ಧನ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿಗೆ ಕಾರ್ಮಿಕ ಮುಖಂಡರು ಅಗ್ರಹಿಸಿದ್ದಾರೆ.

ಶಿರಸಿ ತಾಲೂಕಿನ ವಿವಿಧ ಕಾರ್ಮಿಕ ಸಂಘಟನೆಯ ಪ್ರಮುಖರು ಇಂದು ಸ್ಥಳೀಯ ತಹಶೀಲದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಶಿರಸಿ ತಾಲೂಕಿನಲ್ಲಿ ಮಾರ್ಚ 29,2020 ರವರೆಗೆ ಕಾರ್ಮಿಕ ಕಲ್ಯಾಣ ಮಂಡಳಿಗೆ ನೋಂದಾಯಿತವಾಗಿರುವ 2524 ಕಾರ್ಮಿಕರಿದ್ದು ಇಂದಿನವರೆಗೂ ಕೇವಲ 788 ಕಾರ್ಮಿಕರಿಗೆ ಮಾತ್ರ ಸಹಾಯಧನ ತಲುಪಿದ್ದು ಇರುತ್ತದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಕೋರೋನಾ ಕೋವಿಡ್-19 ಸಂಕಷ್ಟದಿಂದ ಇಗಾಗಲೇ ಸಾಕಷ್ಟು ಆರ್ಥೀಕ ತೊಂದರೆ ಅನುಭವಿಸುತ್ತಿದ್ದು ನೋಂದಾಯಿತ ಕಾರ್ಮಿಕರಿಗೆ ಸರಕಾರ ಘೋಷಿಸಿದ ಆರ್ಥೀಕ ಸಹಾಯಧನ ಶೀಘ್ರ ಬಿಡುಗಡೆ ಮಾಡಿ ಕಾರ್ಮಿಕರಿಗೆ ನೇರವಾಗಬೇಕೆಂದು ಮನವಿಯಲ್ಲಿ ಕಾರ್ಮಿಕ ಮುಖಂಡರು ವಿನಂತಿಸಿಕೊಂಡಿದ್ದಾರೆ. 

ಮನವಿ ಕೋಡುವ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಜುಜೆ ಬಾಬು ಡಿಸೋಜಾ, ಅಶೋಕ ಪಡ್ತಿ, ರಾಜು, ಕಮಲಾಕರ ಆಚಾರಿ, ನಂದನ ಆಚಾರಿ, ಕೃಷ್ಣ  ಮುಂತಾದವರು ಉಪಸ್ಥಿತರಿದ್ದರು.
               
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...