ಹಾವೇರಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ 2019-20ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿ.ಇ.ಟಿ ತರಬೇತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿಯು ಏಳು ತಿಂಗಳದಾಗಿದ್ದು, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ತರಬೇತಿ ಪಡೆಯಲು ಅರ್ಹರಾಗಿದ್ದಾರೆ ಹಾಗೂ ಪ್ರಾಂಶುಪಾಲರಿಂದ ದೃಢೀಕರಣ ಪತ್ರ ಪಡೆದಿರಬೇಕು. ಕುಟುಂಬ ವಾರ್ಷಿಕ ಆದಾಯ 3.50 ಲಕ್ಷ ರೂ.ದೊಳಗಿರಬೇಕು. ಸದರಿ ಯೋಜನೆಯಡಿ ಕೇವಲ ಒಂದು ಬಾರಿ ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆಯೊಂದಿಗೆ ಬ್ಯಾಂಕ್ ಪಾಸ್ಬುಕ್, ಆಧಾರ್ ಕಾರ್ಡ್ ಹಾಗೂ ಇತ್ತೀಚಿನ ನಾಲ್ಕು ಭಾವಚಿತ್ರಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಮೌಲಾನಾ ಆಜಾದ ಭವನ, ಶಿವಾಜಿನಗರ, 3ನೇ ಕ್ರಾಸ್, ಹಾವೇರಿ ಅಥವಾ ಬ್ಯಾಡಗಿ. ರಾಣೇಬೆನ್ನೂರು, ಹಾನಗಲ್, ಹಿರೇಕೆರೂರು, ಶಿಗ್ಗಾಂವ ಹಾಗೂ ಸವಣೂರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15-11-2019ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-234505ನ್ನು ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗುಡ್ಡಪ್ಪ ಜಿಗಳಿಕೊಪ್ಪ ಅವರು ತಿಳಿಸಿದ್ದಾರೆ.
Read These Next
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಸ್ವಾತಂತ್ಯೋತ್ಸವ ಆಚರಣೆ; ಹೊಸ ಯೋಜನೆಗಳನು ಘೋಷಿಸಿದ ಬೊಮ್ಮಾಯಿ
*ರಾಜ್ಯದ ಹುತಾತ್ಮ ಯೋಧರ ಕುಟುಂಬಗಳಿಗೆ ಸರಕಾರಿ ಉದ್ಯೋಗ ಸರಕಾರಿ ಶಾಲೆ, ಕಾಲೇಜುಗಳಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಶೇ.100ರಷ್ಟು ಶೌಚಾಲಯ ...
ಶಿವಮೊಗ್ಗ: ಸಾವರ್ಕರ್ ಪ್ಲೆಕ್ಸ್ ತೆರವು ವಿವಾದ; ಎರಡು ಗುಂಪುಗಳ ನಡುವೆ ಗಲಾಟೆ, ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ
ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಟಾಪಟಿಯಾ ಗಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ...
ಶ್ರೀ ಯೋಗೇಶ್ವರ ಏತನೀರಾವರಿ ಯೋಜನೆಯಲ್ಲಿ ನೀರಾವರಿ ಮತ್ತು ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಆಚಾರ ಹಾಲಪ್ಪ ಬಸಪ್ಪ
ಧಾರವಾಡ : ಜಿಲ್ಲೆಯಲ್ಲಿ ಹರಿಯುವ ತುಪ್ಪರಿಹಳ್ಳದಿಂದ ಬೆಣ್ಣೆಹಳ್ಳಕ್ಕೆ ಸೇರುವ ಸುಮಾರು 1.5 ಟಿಎಂಸಿ ಪ್ರಮಾಣದ ನೀರು ಬಳಸಿಕೊಂಡು, ...
ಧಾರವಾಡ ಹೈಕೋರ್ಟ್ ಪೀಠದಲ್ಲಿ ಸ್ವಾತಂತ್ರ್ಯೋತ್ಸವ
ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ...
ಲೋಕ ಅದಾಲತ್ ಜಿಲ್ಲೆಯಾದ್ಯಂತ 28 ಸಾವಿರಕ್ಕೂ ಅಧಿಕ ಪ್ರಕಾರಣಗಳ ರಾಜಿ 9 ಕೋಟಿ ರೂ.ವಸೂಲಿ
ಧಾರವಾಡ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್ನ್ನು ಲೋಕ ಅದಾಲತ್ ಮೂಲಕ 28,799 ಪ್ರಕರಣಗಳನ್ನು ...
ಹೈಕೋರ್ಟ್ ಪೀಠದಲ್ಲಿ ತಿರಂಗಾ ಅಭಿಯಾನ
ಧಾರವಾಡ : ಹೈಕೋರ್ಟ್ ಪೀಠದಲ್ಲಿ ಶುಕ್ರವಾರ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹರ್ ಘರ್ ತಿರಂಗಾ ಅಭಿಯಾನ ...
ಅಮೆರಿಕ ಚುನಾವಣೆ: ಭಾರತೀಯ ಮೂಲದವರ ಮತಗಳು ನಿರ್ಣಾಯಕ
ಅಮೆರಿಕ ಚುನಾವಣೆ: ಭಾರತೀಯ ಮೂಲದವರ ಮತಗಳು ನಿರ್ಣಾಯಕ
ಪೊಲೀಸ್ ಕಾನ್ಸ್ಟೇಬಲ್ ಪತ್ನಿ ಸೇರಿದಂತೆ ೧೩ ಮಂದಿಗೆ ಕೊರೋನಾ ಸೋಂಕು
ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಕೊರೋನಾ ಸೋಂಕು ನಿಲ್ಲುವ ಸೂಚನೆ ನೀಡುತ್ತಿಲ್ಲ. ಬುಧವಾರ ೧೩ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ...
ಕೊರೊನಾ ಸೋಂಕು ಎರಡನೇ ಹಂತ ದಾಟದಂತೆ ಕ್ರಮ ವಹಿಸೋಣ# #ನಾನು ಬದುಕಬೇಕೆಂಬ ಭಾವನೆ ಮೊದಲು ಬರಬೇಕು : ಕೆ.ಎಸ್.ಈಶ್ವರಪ್ಪ
ಕೊರೊನಾ ಸೋಂಕು ಎರಡನೇ ಹಂತ ದಾಟದಂತೆ ಕ್ರಮ ವಹಿಸೋಣ# #ನಾನು ಬದುಕಬೇಕೆಂಬ ಭಾವನೆ ಮೊದಲು ಬರಬೇಕು : ಕೆ.ಎಸ್.ಈಶ್ವರಪ್ಪ
ಮಂಗಳೂರು ಗೋಲಿಬಾರ್: ಹಲವು ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರವೇ ಇಲ್ಲ: New Indian Express ವರದಿ
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಕಾರರ ಮೇಲೆ ಗುರುವಾರ ನಗರದಲ್ಲಿ ನಡೆದ ಗೋಲಿಬಾರ್ ನಲ್ಲಿ ಇಬ್ಬರು ...
ಸಂಘಗಳಲ್ಲಿ ಉಳಿತಾಯ ಮಾಡುವುದರ ಜತೆಗೆ ಉದ್ಯಮಶೀಲರಾಗಿ ಹೊರಹೊಮ್ಮಿ: ಡಿಸಿ
ಸಂಘಗಳಲ್ಲಿ ಉಳಿತಾಯ ಮಾಡುವುದರ ಜತೆಗೆ ಉದ್ಯಮಶೀಲರಾಗಿ ಹೊರಹೊಮ್ಮಿ: ಡಿಸಿ