ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

Source: sonews | By Staff Correspondent | Published on 26th August 2019, 11:36 PM | Coastal News |

ಕಾರವಾರ :  ಮಹಾರಾಷ್ಟ್ರದ ನಾಗಪೂರದಲ್ಲಿ ಅಕ್ಟೋಬರ್ ಮಾಹೆಯ ಎರಡನೇ ಅಥವಾ ಮೂರನೇ ವಾರದಲ್ಲಿ ದೀಕ್ಷಾಭೂಮಿ ಯಾತ್ರೆಗೆ ಉತ್ತರಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ರವರ ಅನುಯಾಯಿಗಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ : www.sw.kar.nic.in ನಲ್ಲಿ ದೀಕ್ಷಾಭೂಮಿ ಯಾತ್ರೆ ಎಂಬ ಹೆಸರಿನಲ್ಲಿ ಲಭ್ಯವಿರುತ್ತದೆ. ಮಹಾರಾಷ್ಟ್ರದ ನಾಗಪೂರದ ದೀಕ್ಷಾಭೂಮಿ ಯಾತ್ರೆಗೆ ಹೊರಡುವಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಆಸ್ತಕ ಅನುಯಾಯಿಗಳು ದಿನಾಂಕ: 10.09.2019 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ದಾಖಲೆ, ವಿವರ  ಹಾಗೂ ಷರತ್ತುಗಳಿಗಾಗಿ ಉತ್ತರಕನ್ನಡ ಜಿಲ್ಲೆಯ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು  ಸಮಾಜ ಕಲ್ಯಾಣ ಇಲಾಖೆ  ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...