ಕಾರವಾರ : ಮಹಾರಾಷ್ಟ್ರದ ನಾಗಪೂರದಲ್ಲಿ ಅಕ್ಟೋಬರ್ ಮಾಹೆಯ ಎರಡನೇ ಅಥವಾ ಮೂರನೇ ವಾರದಲ್ಲಿ ದೀಕ್ಷಾಭೂಮಿ ಯಾತ್ರೆಗೆ ಉತ್ತರಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ರವರ ಅನುಯಾಯಿಗಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ : www.sw.kar.nic.in ನಲ್ಲಿ ದೀಕ್ಷಾಭೂಮಿ ಯಾತ್ರೆ ಎಂಬ ಹೆಸರಿನಲ್ಲಿ ಲಭ್ಯವಿರುತ್ತದೆ. ಮಹಾರಾಷ್ಟ್ರದ ನಾಗಪೂರದ ದೀಕ್ಷಾಭೂಮಿ ಯಾತ್ರೆಗೆ ಹೊರಡುವಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಆಸ್ತಕ ಅನುಯಾಯಿಗಳು ದಿನಾಂಕ: 10.09.2019 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ದಾಖಲೆ, ವಿವರ ಹಾಗೂ ಷರತ್ತುಗಳಿಗಾಗಿ ಉತ್ತರಕನ್ನಡ ಜಿಲ್ಲೆಯ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.