ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Source: so news | By MV Bhatkal | Published on 24th June 2019, 9:15 PM | Coastal News | Don't Miss |

ಕಾರವಾರ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2019-20ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ, ಪಂಚವೃತ್ತಿ ಸಾಲ, ಮೈಕ್ರೋಕ್ರೆಡಿಟ್, ಅರಿವು ಶೈಕ್ಷಣಿಕ ಸಾಲ ಹಾಗೂ ಗಂಗಾ ಕಲ್ಯಾಣ  ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವವರಿಂದ ಅರ್ಜಿಯನ್ನು ಅಹ್ವಾನಿಸಿದೆ.   
ಅರ್ಜಿ ನಮೂನೆಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಹೈ ಚರ್ಚ ಹತ್ತಿರ, ಕಾರವಾರ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತಿರ್ಣಾಧಿಕಾರಿಗಳ ಕಛೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 22/07/2019 ರೊಳಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕಾರವಾರದ ವಿಳಾಸಕ್ಕೆ ಸಲ್ಲಿಸುವುದು. 
ನಿಗದಿತ ನಮೂನೆಯ ಅರ್ಜಿಯೊಂದಿಗೆ ಫೋಟೋ, ರೇಷನಕಾರ್ಡ ಪ್ರತಿ, ಆಧಾರ ಪ್ರತಿ, ಜಾತಿ ಆದಾಯ ಪ್ರತಿ , ಬ್ಯಾಂಕ ಪಾಸ್‍ಬುಕ್ ಪ್ರತಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ. ಅರ್ಜಿದಾರರ ವಯಸ್ಸು 18 ರಿಂದ 55ರ ಮಿತಿಯಲ್ಲಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 40.000/- ರೂಗಳ ಒಳಗೆ ಹಾಗೂ ಪಟ್ಟಣ ಪ್ರದೇಶದವರಿಗೆ 55.000/- ರೂ. ಕ್ಕಿಂತ ಕಡಿಮೆ ಇರಬೇಕು. 
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯ ದೂರವಾಣಿ ಸಂಖ್ಯೆ : 08382-223229 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...