ಕ.ಕಾ.ಪ.ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕಾಗಿ ಅರ್ಜಿ ಅಹ್ವಾನ

Source: SOnews | By Staff Correspondent | Published on 22nd January 2021, 6:20 PM | Coastal News |

ಭಟ್ಕಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಾ ಸಮಿತಿಗಳಿಗೆ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕೆ ಜ.೩೦ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಕಾರ್ಯದರ್ಶಿ ನರಸಿಂಹ ಅಡಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ರಾಜ್ಯದಲ್ಲಿಯೇ ಪತ್ರಕರ್ತರ ಅತಿ ದೊಡ್ಡ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗ ಸಂಸ್ಥೆಯಾದ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೧ನೇ ಸಾಲಿನ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಆಹ್ವಾನಿಸಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವವರು ಆಯಾಯ ತಾಲೂಕಿನ ಸಂಘಕ್ಕೆ ಸದಸ್ಯತ್ವ ಬಯಸಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಹೊಸದಾಗಿ ಸದಸ್ಯತ್ವವನ್ನು ಬಯಸುವವರು ಕನಿಷ್ಟ ಒಂದು ವರ್ಷದಿಂದ ವರದಿಗಾರರಾಗಿ ಕೆಲಸ ಮಾಡುತ್ತಿರಬೇಕು. ಆಯಾಯಾ ತಾಲೂಕಿನ ಅಧ್ಯಕ್ಷರು/ಕಾರ್ಯದರ್ಶಿಯವರನ್ನು ಸಂಪರ್ಕಿಸಿ ಅವರಿಂದ ಅರ್ಜಿ ಫಾರಂ ಪಡೆದುಕೊಂಡು ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ಪತ್ರಕರ್ತರ ಸಂಘಟನೆಯಲ್ಲಿ ಸದಸ್ಯರಾಗಿದ್ದವರಿಗೆ ಇಲ್ಲಿ ಸದಸ್ಯರಾಗಲು ಅವಕಾಶವಿರುವುದಿಲ್ಲ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಘಟನೆಯ ಸದಸ್ಯರಾಗ ಬಯಸುವವರು ಅರ್ಜಿ ಫಾರಂ ತುಂಬಿ ಕಡ್ಡಾಯವಾಗಿ ತಾಲೂಕಾ ಸಂಘಗಳಿಗೇ ನೀಡಬೇಕು. ಯಾವುದೇ ಕಾರಣಕ್ಕೂ ಜಿಲ್ಲಾ ಸಂಘ ನೇರವಾಗಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದೂ ತಿಳಿಸಿದ್ದಾರೆ. 

                                

Read These Next