ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ, ರೈತಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ) - ಮಾಜಿ ಪ್ರಧಾನಮಂತ್ರಿ ಶ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ ಹಾಗೂ ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು) - ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ ಹಾಗೂ ಡಾ. ಆರ್. ದ್ವಾರಕೀನಾಥ್
ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
ಜಿಲ್ಲಾ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು) - ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ ತಾಲ್ಲೂಕು ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 61 ತಾಲ್ಲೂಕುಗಳು) - ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಿರುವ ಕೃಷಿ ಮೇಳ-2023ರ ಸಂದರ್ಭದಲ್ಲಿ ನೀಡಲಾಗುತ್ತದೆ. ಈ ಸಂಬಂಧ ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳಾದ ಹಾಡೋನಹಳ್ಳಿ -ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ, ವಿಸ್ತರಣಾ ಶಿಕ್ಷಣ ಘಟಕಗಳಾದ ನಾಗನಹಳ್ಳಿ-ಮೈಸೂರಿನಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಾಲತಾಣ www.uasbangalore.edu.in ನಲ್ಲಿ ಸಹ ಲಭ್ಯವಿರುತ್ತದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ. 080-23330153, ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.