ಕಾರವಾರ: ಪತ್ರಿಕೋದ್ಯಮ ಮಹಿಳಾ ಅಪ್ರೆಂಟಿಸ್‍ಗೆ ಅರ್ಜಿ ಆಹ್ವಾನ

Source: S.O. News Service | By I.G. Bhatkali | Published on 20th June 2019, 4:25 PM | Coastal News | Don't Miss |

ಕಾರವಾರ: 2019-20ನೇ ಸಾಲಿನ ಮಹಿಳಾ ಉದ್ದೇಶಿತ ಅಯವ್ಯಯ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪತ್ರಿಕೋದ್ಯಮ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ ಅಥವಾ ಸ್ನಾತಕ್ಕೋತ್ತರ ಪದವಿ ಪಡೆದಿರಬೇಕು. ಗರಿಷ್ಠ 40 ವರ್ಷ ವಯೋಮಿತಿಯಲ್ಲಿರಬೇಕು.

ರಾಜ್ಯ ಸರ್ಕಾರದ ಮಹಿಳಾ ಉದ್ದೇಶಿತ 2019-20ನೇ ಸಾಲಿನ ಆಯವ್ಯಯದ ಕಾರ್ಯಕ್ರಮದಡಿ 9 ತಿಂಗಳ ಅವಧಿಗೆ ಈ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದ್ದು ಪ್ರತಿ ತಿಂಗಳು 15 ಸಾವಿರ ರೂ. ಗೌರವಧನ ನೀಡಲಾಗುವುದು.

ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಅಥವಾ ಪದವಿಯ ಜತೆಗೆ ಕಂಪ್ಯೂಟರ್ ಜ್ಞಾನ, ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿ ಇರಬೇಕು. ಅರ್ಜಿಯೊಂದಿಗೆ ಈ ಎಲ್ಲಾ ದಾಖಲೆಗಳನ್ನು ಅಡಕವಿರಿಸಿ ಲಕೋಟೆ ಮೇಲ್ಭಾಗದಲ್ಲಿ `2019-20ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ’ ಎಂದು ಬರೆದಿರಬೇಕು.

ಇಬ್ಬರು ಮಹಿಳಾ ಅಪ್ರೆಂಟಿಸ್‍ಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಲಿದ್ದು ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಪ್ರೆಂಟಿಸ್‍ಗೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಹಾಗೂ ತರಬೇತಿ ಅವಧಿಯಲ್ಲಿ ಬೇರೆ ಯಾವುದೇ ವೃತ್ತಿ ಮಾಡುವಂತಿಲ್ಲ. ಒಂದೊಮ್ಮೆ ತರಬೇತಿಯಿಂದ ಮಧ್ಯದಲ್ಲೇ ಬಿಟ್ಟು ಹೋದರೆ ಮೂಲ ದಾಖಲೆಗಳನ್ನು ಅವಧಿ ಪೂರ್ಣಗೊಳ್ಳುವವರೆಗೆ ವಾಪಸು ಕೊಡುವುದಿಲ್ಲ ಹಾಗೂ ತರಬೇತಿಯು 9 ತಿಂಗಳ ತಾತ್ಕಾಲಿಕ ಅವಧಿಯದ್ದಾಗಿದ್ದು ಯಾವುದೇ ಕಾರಣಕ್ಕೂ ಮುಂದುವರಿಸುವುದಿಲ್ಲ ಹಾಗೂ ಇಲಾಖೆ ವಿಧಿಸಬಹುದಾದ ಎಲ್ಲ ಷರತ್ತುಗಳಿಗೆ ಬದ್ದರಿರಬೇಕು.

ಅರ್ಜಿ ಸಲ್ಲಿಸಲು 2019 ಜುಲೈ 5 ಕೊನೆಯ ದಿನವಾಗಿದ್ದು ನಿಗದಿತ ಅರ್ಜಿ ನಮೂನೆಗಳಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಕಾರವಾರ, ಉತ್ತರ ಕನ್ನಡ ಜಿಲೆ,್ಲ ದೂರವಾಣಿ 08382 226344, 9480841234 ಇಲ್ಲಿ ಸಂಪರ್ಕಿಸಬಹುದು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...