ಕಾರವಾರ; ಕೃಷಿ ವಿಕಾಸ ಯೋಜನೆ; ಅರ್ಜಿ ಆಹ್ವಾನ
ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2021-22 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಅರ್ಹ ಪಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಕ್ಟೋಬರ 7 ಕೊನೆಯ ದಿನವಾಗಿದ್ದು, ಅರ್ಹ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.62,000 ಇದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33 ರೂ.20665 ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25 ರೂ. 15,500 ಗಳ ಸಹಾಯಧನ ಒದಗಿಸಲಾಗುವುದು.
ಘಟಕದ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯಬಹುದಾಗಿದೆ. ಫಲಾನುಭವಿ ಆಧಾರಿತ ಕಾರ್ಯಕ್ರಮಕ್ಕೆ ಆದ್ಯತೆ ಮೇರೆಗೆ ಕೂಲಿ, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲಾಗುವುದು,
ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ಅಂಗವೀಕಲರಿಗೆ ಶೇ.3 ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಪಶುಪಾಲನೆ ಮತ್ತು ಪಶುವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ, ಮುಖ್ಯ ಪಶುವೈದ್ಯಾಧಿಕಾರಿ, ಪಶು ಆಸ್ಪತ್ರೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ನಂದಕುಮಾರ ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.