ಮಂಗಳೂರು : ಸಿಲೇಬಸ್ ಕಡಿಮೆ ಮಾಡಿ ವಿದ್ಯಾರ್ಥಿಗಳಿಗೆ ಎಷ್ಟು ಕಲಿಸಬಹುದು.
ಎಸೆಸೆಲ್ಸಿ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ.
ರಾಜ್ಯದಲ್ಲಿ ಶಾಲಾ ಆರಂಭ ವಿಚಾರಕ್ಕೆ
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಶಿಕ್ಷಣ ವ್ಯವಸ್ಥೆ ಗೊಂದಲದಲ್ಲಿದೆ. ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ ಇದ್ದರೂ ನೇಮಕಾತಿ ಆಗುತ್ತಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಅವರು ಒತ್ತಾಯಿಸಿದರು.