ಭಟ್ಕಳ: ಸ್ಥಳೀಯ ಅರಣ್ಯ ಅಧಿಕಾರಿಗಳಿಂದ ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ಮತ್ತು ದೌರ್ಜನ್ಯವಾಗುತ್ತಿರುವ ಕುರಿತು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ, ಶಿರಸಿ ಮುಖ್ಯ ಅರಣ್ಯಾಧಿಕಾರಿ ಸ್ಥಳ ಪರಿಶೀಲನೆ ಜರುಗಿಸಿದ್ದು, ಸಮಸ್ಯೆಗಳ ಕುರಿತು ಸಿ.ಸಿ.ಎಫ್. ಕಚೇರಿಯಲ್ಲಿ ಫೆ.12ರಂದು ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರ ಮತ್ತು ಗ್ರಾಮೀಣ ಭಾಗದ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಂದ ತೊಂದರೆಗೊಳಗಾದ ಸ್ಥಳದÀ ಪರಿಶೀಲನೆ ಜರುಗಿಸಿದ್ದು, ಅಸ್ತಿತ್ವದಲ್ಲಿರುವ ಸಾಗುವಳಿ ಭೂಮಿಯಲ್ಲಿ ಕಟ್ಟಿಕೊಂಡಿರುವ ಮನೆ ರಿಪೇರಿ, ಪುನರ್ ನಿರ್ಮಾಣ ಮತ್ತು ನವೀಕರಣಕ್ಕೆ ಈಗಾಗಲೇ ಸಿಬ್ಬಂದಿಗಳು ಆತಂಕ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ 5-6 ತಿಂಗಳಿನಿಂದ ಈ ಸಂಬಂಧ ಹಲವಾರು ಪ್ರತಿಭಟನೆ, ಸಭೆ, ಸಮಾರಂಭ ಜರುಗಿಸಿದ್ದು ಹೋರಾಟಗಾರರ ವೇದಿಕೆಯು ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ದೂರನ್ನು ನೀಡಿದ ಹಿನ್ನೆಲೆಯಲ್ಲಿ ಸಿ.ಸಿ.ಎಫ್. ಪರವಾನಿಗೆ ಮೇರೆಗೆ ವಿಶೇಷ ಅಧಿಕಾರಿ ರಘು ಅವರು ಅತಿಕ್ರಮಣದಾರರ ಸಾಗುವಳಿಯ ನೈಜತೆಯನ್ನು ಪರಿಶೀಲಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಹೊನ್ನಾವರ ಡಿ.ಎಫ್.ಒ. ಗಣಪತಿ, ಎ.ಸಿ.ಎಫ್. ಸುದರ್ಶನ, ಆರ್.ಎಫ್.ಒ ಸವಿತಾ ದೇವಾಡಿಗ, ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ, ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಮಹಮ್ಮದ್ ಅಲಿ, ಮಾದೇವ ನಾಯ್ಕ, ರಾಮ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...