ಬನವಾಸಿಯಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರ ಬಂಧನ. ಇನ್ನಿಬ್ಬರು ಪರಾರಿ.

Source: SO News | By Laxmi Tanaya | Published on 23rd September 2020, 10:28 PM | Coastal News | Don't Miss |

ಶಿರಸಿ : ಶ್ರೀಗಂಧ ಕಟ್ಟಿಗೆಯನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ   ಶಿರಸಿ ತಾಲೂಕಿನ ಬನವಾಸಿಯಲ್ಲಿ ಪೊಲೀಸರು‌ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹೇಶ್ ಗುಡಿಗಾರ(48), ಗಣೇಶ ಗುಡಿಗಾರ(50) ಎಂಬುವವರನ್ನು ಬಂಧಿತರಾಗಿದ್ದು,  ಫೀರ್ ಖಾನ್ ಹಾಗೂ ಶಬಾನಾ ಫೀರ್ ಖಾನ್ ಚಿಕ್ಕಜಂಬೂರು ಮೂಲದ ವ್ಯಕ್ತಿಗಳು ಪರಾರಿಯಾದವರು.

ಸೊರಬದಿಂದ ಬನವಾಸಿ ಕಡೆಗೆ ಸ್ವಿಪ್ಟ್ ಕಾರಿನಲ್ಲಿ ಗಂಧದ ತುಂಡುಗಳನ್ನು ಹಾಕಿಕೊಂಡು ಶಿರಸಿ ಕಡೆಗೆ ಬರುತಿದ್ದರು
ಖಚಿತ ಮಾಹಿತಿ ಪಡೆದ ಬನವಾಸಿ ಪೊಲೀಸರು ಕಾರನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು  ಇಬ್ಬರನ್ನು  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 6 ಗಂಧದ ತುಂಡುಗಳನ್ನು ಹಾಗೂ ಸಾಗಾಣಿಕೆಗೆ ಬಳಸಿದ ಸ್ವಿಫ್ಟ್ ಕಾರನ್ನು ಸಹ ವಶಪಡೆಯಲಾಗಿದ್ದು, ಬನವಾಸಿ ಪೊಲೀಸರು  ತನಿಖೆ ನಡೆಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...