ಹಾಲು ಶಿಥಿಲೀಕರಿಸಿ ಸರಬರಾಜು ಮಾಡುವವರಿಗೆ ಧನ ಸಹಾಯ ವಿತರಣೆ

Source: sonews | By Staff Correspondent | Published on 16th July 2020, 7:37 PM | State News |

ಶ್ರೀನಿವಾಸಪುರ:  ಹಾಲನ್ನು ಶೀಥಲೀಕರಿಸಿ ಒಕ್ಕೂಟಕ್ಕೆ ಸರಬರಾಜು ಮಾಡುವ ಉದ್ದೇಶಕ್ಕೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಲು ಸಹಾಯ ಧನ ನೀಡಲಾಗುತ್ತಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.

ಪಟ್ಟಣದ ಕೋಚಿಮುಲ್ ಶಿಬರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬಿಎಂಸಿ ಘಟಕ ಅಳವಡಿಸಲು ಸಿವಿಲ್‌ ಕಾಮಗಾರಿ ಕೈಗೊಳ್ಳಲು ಹಾಗೂ ವಿವಿಧ ಕಾರಣಗಳಿಂದ ಮರಣ ಹೊಂದಿದ ಹಸುಗಳ ಮಾಲೀಕರಿಗೆ ಆರ್ಥಿಕ ನೆರವಿನ ಚೆಕ್‌ ವಿತರಿಸಿ ಮಾತನಾಡಿ, ಚೌಡನಹಳ್ಳಿ, ಕೂಳುಗುರ್ಕಿ, ನಾರವಮಾಕಲಹಳ್ಳಿ, ದೊಡ್ಡ ಬಂದಾರ್ಲಹಳ್ಳಿ ಹಾಗೂ ಕೆ.ವಡಿಗೇಪಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಿಎಂಸಿ ಘಟಕ ಅಳವಡಿಸಲು ತಲಾ ರೂ.1 ಲಕ್ಷ ನೀಡಲಾಗಿದೆ ಎಂದು ಹೇಳಿದರು.

ಒಕ್ಕೂಟದಲ್ಲಿ ಗುಂಪು ರಾಸು ವಿಮೆ ಚಾಲ್ತಿಯಲ್ಲಿದ್ದು, ಒಟ್ಟು ಪ್ರೀಮಿಯಂ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ದರದಲ್ಲಿ ರಾಸುಗಳಿಗೆ ವಿಮೆ ಮಾಡಲಾಗುತ್ತಿದೆ. ಎಲ್ಲ ಹಾಲು ಉತ್ಪಾದಕರೂ ತಮ್ಮ ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂದು ಹೇಳಿದರು.

ಉಪ ಕಚೇರಿಯ ಉಪ ವ್ಯವಸ್ಥಾಪಕ ಡಾ. ವಿ.ಎನ್‌.ಶ್ರೀಕಾಂತ್‌, ಸಹಾಯಕ ವ್ಯವಸ್ಥಾಪಕ ಕೆ.ಎಸ್‌.ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ.ಶ್ರೀನಿವಾಸ್‌, ಎನ್‌.ದೇವರಾಜ್‌, ಪಿ.ಕೆ.ನರಸಿಂಹರಾಜು, ಎನ್‌.ಗಣೇಶ್‌, ಎಸ್‌.ವಿನಾಯಕ, ಕೆ.ಪಿ.ಶ್ವೇತ, ಎ.ಎನ್‌.ಶ್ರೀನಿವಾಸ ಮೂರ್ತಿ ಇದ್ದರು. 

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...