ಕಾರವಾರ: ರಾಜ್ಯ ಲೋಕಸೇವಾ ಆಯೋಗದಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಜ.23 ಹಾಗೂ 24 ರಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೇಗಳನ್ನು ನಡೆಸಲಾಗುತ್ತದೆ.
ಕೋವಿಡ್-19 ಮುಂಜಾಗ್ರ ಕ್ರಮಗಳೊಂದಿಗೆ ಸುವ್ಯವಸ್ಥಿತವಾಗಿ ಹಾಗೂ ನಕಲು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ವೀಕ್ಷಕರು ಹಾಗೂ ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದ್ದು ಅಭ್ಯರ್ಥಿಗಳು ಯಾವುದೇ ತರಹದ ಮೊಬೈಲ್, ಸ್ಮಾರ್ಟ ವಾಚ್, ಕ್ಯಾಲ್ಕ್ಯೂಲೇಟರ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ಸಂಪೂರ್ಣವಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.