ಭುವನೇಶ್ವರ: ತಿತ್ಲಿ ಚಂಡಮಾರುತದಿಂದ ತತ್ತರಿಸಿರುವ ಒಡಿಶಾದಲ್ಲಿ ಚಂಡಮಾರುತದಿಂದಾಗಿ ಸತ್ತವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಇದುವರೆಗೂ 57 ಮಂದಿ ಮೃತಪಟ್ಟಿದ್ದರೆ, ಭಾರೀ ಮಳೆಯಿಂದಾಗಿ ಪ್ರವಾಹ, ಹಲವೆಡೆ ಭೂಕುಸಿತ, ಗೋಡೆಗಳ ಕುಸಿತದಿಂದಾಗಿ ಹಲವಾರು ಜನ ನಾಪತ್ತೆಯಾಗಿದ್ದಾರೆ.
ಒಡಿಶಾದ 17 ಜಿಲ್ಲೆಗಳಲ್ಲಿ 2,73,425 ಎಕರೆಯಲ್ಲಿದ್ದ ಬೆಳೆ ನಾಶವಾಗಿದ್ದು, ರೂ. 2,765 ನಷ್ಟವಾಗಿದೆ ಎಂದು ಒಡಿಶಾ ಸರ್ಕಾರ ಹೇಳಿಕೊಂಡಿದೆ. 8125 ಗ್ರಾಮಗಳ 60,11,000 ಜನರು ಸಂಕಷ್ಟಕ್ಕೆ ಸಿಲುಕಿದ್ದು, 57,131 ಮನೆಗಳಿಗೆ ಹಾನಿಯಾಗಿದೆ ಎಂದು ವಿಶೇಷ ಪರಿಹಾರ ಆಯೋಗ ತಿಳಿಸಿದೆ.
ರಾಯಗಢ ಜಿಲ್ಲೆಯ ಗಂಜಾಮ್, ಗಜಪತಿ ಮತ್ತು ಗುನುಪುರ್ ಉಪವಿಭಾಗದ ಎಲ್ಲ ಪ್ರವಾಹ ಪೀಡಿತ ಕುಟುಂಬಗಳಿಗೆ 15 ದಿನಗಳವರೆಗೆ ದಿನಕ್ಕೆ ವಯಸ್ಕರಿಗೆ 60 ರೂ. ಮತ್ತು ಮಕ್ಕಳಿಗೆ 45 ರೂ.ಗಳಂತೆ ಪರಿಹಾರ ನೀಡುವ ಕುರಿತು ಸರ್ಕಾರ ಘೋಷಿಸಿದ್ದು, ಈ ಸಂಬಂಧ ಮುಂಗಡವಾಗಿ 1.02 ಶತಕೋಟಿ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಇದರಲ್ಲಿ ಗಜಪತಿಗೆ 1100 ಲಕ್ಷ, ಗಂಜಮ್ಗೆ 8960 ಲಕ್ಷ ಮತ್ತು ರಾಯಗಢಕ್ಕೆ 140 ಮಿಲಿಯನ್ ಹಣವನ್ನು ಬಿಡುಗಡೆ ಮಾಡಿದೆ.
ಇದಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು, ಆರೋಗ್ಯ ಮತ್ತು ಪಶುವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೊರೆ ಹೋಗಿರುವ ಒಡಿಶಾ ಸರ್ಕಾರ, ಈಗಾಗಲೇ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಮಧ್ಯಂತರ ಪರಿಹಾರವಾಗಿ 1000 ಕೋಟಿ ಹಣವನ್ನು ಪರಿಹಾರ ಮತ್ತು ಪುನಃಸ್ಥಾಪನೆಗಾಗಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೋರಿದ್ದಾರೆ
Read These Next
ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ
ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...
'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್ದೇವ್ಗೆ 1 ವಾರದ ಗಡುವು
ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...
ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ...
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...
ದಿಲ್ಲಿ ಅಬಕಾರಿ ನೀತಿ ಪ್ರಕರಣ; ಸಂಜಯ್ ಸಿಂಗ್ಗೆ ಜಾಮೀನು
ದಿಲ್ಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ದಿಂದ ಬಂಧನಕ್ಕೆ ...
ಪತಂಜಲಿ ವಿರುದ್ಧ ಮೌನ ವಹಿಸಿದ್ದ ಕೇಂದ್ರ ಸರಕಾರಕ್ಕೂ ಸುಪ್ರೀಂ ತರಾಟೆ
ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ...