ದರೋಡೆಗೆ ಯತ್ನ; ಸಾಗರದಲ್ಲಿ ಭಟ್ಕಳ ಮೂಲದ ಐದು ಜನರ ಬಂಧನ

Source: sonews | By Staff Correspondent | Published on 24th August 2019, 5:23 PM | Coastal News |

ಭಟ್ಕಳ: ನೆರೆಯ ಸಾಗರ ತಾಲೂಕಿನ ಜೋಗರಸ್ತೆಯಲ್ಲಿ ದರೋಡೆಗೆ ಯತ್ನಿಸಿದ ಆರೋಪದಲ್ಲಿ ಭಟ್ಕಳ ಮೂಲದ ಐದು ಜನರನ್ನು ಸಾಗರ ಠಾಣೆಯ ಪೊಲೀಸರು ಬಂಧಿಸಿದ್ದಾಗಿ ವರದಿಯಾಗಿದೆ. 

ಬಂಧಿತರನ್ನು ಭಟ್ಕಳದ ಮುಹಮ್ಮದ್ ಮುಸ್ತಫಾ, ಅಕ್ರಮ್ ಹಸನ್, ಸುಹೇಲ್ ಗಂಗೋಳಿ, ಸಮೀರ್ ಆಹ್ಮದ್ ಹಾಗೂ ಅಬ್ದುಲ್ ಮುಈನ್ ಎಂದು ಗುರುತಿಸಲಾಗಿದೆ. 

ಇವರು ಸೋಮವಾರ ತಡರಾತ್ರಿ  ಸಾಗರ ತಾಲೂಕಿನ ಜೋಗ ರಸ್ತೆಯ ತಿರುವಿನಲ್ಲಿ ವಾಹನವೊಂದನ್ನು ದರೋಡೆಗೆ ಪ್ರಯತ್ನಿಸಿದ್ದು ಆ ವಾಹನ ಗಸ್ತು ತಿರುಗುತ್ತಿದ್ದ ಪೊಲೀಸರ ವಾಹನ ಎಂದು ತಿಳಿದ ದರೋಡೆಕೋರರು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಗ ಬೆನ್ನಟ್ಟಿದ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಆರೋಪಿಗಳಿಂದ ಕಾರನ್ನು ವಶಪಡಿಸಿಕೊಂಡಿದ್ದು ಅದರಲ್ಲಿದ್ದ ಮಚ್ಚು, ಕಬ್ಬಿಣದ ರಾಡ್, ಮೆಣಸಿನ ಹುಡಿ, ಮರದ ದೊಣ್ಣೆ ಮತ್ತಿತರ ವಸ್ತುಗಳನ್ನು ಜಪ್ತುಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...