ಕೊರೋನಾ ಸೋಂಕಿತೆ ಮೇಲೆ ಅತ್ಯಾಚಾರ; ವೈದ್ಯನ ವಿರುದ್ಧ ಪ್ರಕರಣ ದಾಖಲು

Source: sonews | By Staff Correspondent | Published on 3rd August 2020, 5:51 PM | State News | Don't Miss |

ಬೆಂಗಳೂರು:  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನ ಪೀಡಿತ ಯುವತಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಆರೋಪದಲ್ಲಿ  ಬೆಂಗಳುರಿನ ವಿಕ್ಟೋರಿಯ ಆಸ್ಪತ್ರೆಯ ವೈದ್ಯರ ವಿರುದ್ಧ  ಕೇಸು ದಾಖಲಾಗಿದೆ.

ಜುಲೈ 25ಕ್ಕೆ ಘಟನೆ ನಡೆದಿದೆ ಎನ್ನಲಾಗಿದೆ. ಟ್ರಾಮ ಕೇರ್ ಸೆಂಟರ್ ಡ್ಯೂಟಿಯಲ್ಲಿರುವ ವೈದ್ಯರು ರಾತ್ರೆ ಆರೋಗ್ಯ ತಪಾಸಣೆಗೆಂದು ಕೊರೋನ ವಾರ್ಡಿನಲ್ಲಿಯೇ ಉಳಿದಿದ್ದರು. ಯುವತಿಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದಾಗ ಯುವತಿ ಬೊಬ್ಬೆ ಹೊಡೆದಿದ್ದು, ವೈದ್ಯ ತಪ್ಪಿಸಿಕೊಂಡಿದ್ದಾನೆ.

ವೈದ್ಯ ಗೌನ್ ಮತ್ತು ಮಾಸ್ಕ್ ಧರಿಸಿದ್ದರಿಂದ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ. ಯುವತಿ ಟ್ರಾಮ ಕೇರ್ ಸೆಂಟರ್ ನೋಡಲ್ ಅಧಿಕಾರಿಗೆ ದೂರು ನೀಡಿದ್ದಾಳೆ. ಆದರೆ, ಆಸ್ಪತ್ರೆಯು ಅಧಿಕೃತ ವೈದ್ಯರ ವಿವರಗಳನ್ನು ಕೊಡಲು ತಯಾರಾಗಿಲ್ಲ. ನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯರ ವಿರುದ್ಧ ಲೈಂಗಿಕ ಕಿರುಕುಳ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಸಮಿತಿಯನ್ನು ನೇಮಿಸಲಾಗಿದೆ ಎಂದು ವಿಕ್ಟೋರಿಯ ಆಸ್ಪತ್ರೆಯ ಸೂಪರಿಡೆಂಟ್ ಡಾ. ರಮೇಶ್ ಕೃಷ್ಣ.ಕೆ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...