ಹಾಸನ:ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಮತದಾರರ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಕುರಿತು ಬೃಹತ್ ಆಟೋ ಜಾಥಾ ನಡೆಯಿತು.
ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ಜಾಥಾಕ್ಕೆ ಚಾಲನೆ ನೀಡಿದರು. ಚುನಾವಣಾ ವೀಕ್ಷಕರಾದ ಶಶಿಭೂಷಣ್ ಕುಮಾರ್, ಮಂಜಿತ್ ಸಿಂಗ್ ಬ್ರಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಎ.ಎನ್.ಪ್ರಕಾಶ್ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಎನ್.ವಿಜಯ್ ಪ್ರಕಾಶ್, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪ್ರಿಯಾಂಗ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಉಪವಿಭಾಗಾಧಿಕಾರಿಗಳಾದ ಡಾ|| ಹೆಚ್.ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ವಿನೋದ್ ಚಂದ್ರ, ಸಹಾಯಕ ಚುನಾವಣಾಧಿಕಾರಿಗಳಾದ ಗಿರೀಶ್ ನಂದನ್, ಶ್ರೀನಿವಾಸ್ಗೌಡ, ತಹಸೀಲ್ದಾರ್ ಶ್ರೀನಿವಾಸಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆಶೋಕ್ ಕುಮಾರ್, ಸಮಾಜ ಸೇವಕರಾದ ಪಾಷ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಆಟೋ ರಿಕ್ಷಾ ಮೆರವಣಿಗೆ ವಿಶೇಷ: ಮತದಾರರ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಕುರಿತು ನಡೆದ ಬೃಹತ್ ಆಟೋ ಜಾಥಾ ಮೆರವಣಿಗೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಆಟೋಗಳು ಸರದಿ ಸಾಲಿನಲ್ಲಿ ಸಾಗಿ ಎನ್.ಆರ್.ವೃತ್ತದಲ್ಲಿ ವಿಶೇಷ ವಿನ್ಯಾಸ ನಿರ್ಮಿಸಿದವು.
ಮತದಾನ ಜಾಗೃತಿ ಎಂಬ ಬರಹದೊಂದಿಗೆ ಸಿದ್ದಪಡಿಸಿರುವ ಖಾಕಿ ಸಮವಸ್ತ್ರ ಹಾಗೂ ಟೋಪಿಯನ್ನು ಧರಿಸಿದ ಆಟೋ ಚಾಲಕರು ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟ ಮೆರವಣಿಗೆಯಲ್ಲಿ ಮಹಿಳಾ ಅರಸೇನಾ ಪಡೆ ಹಾಗೂ ಕೆ.ಎಸ್.ಆರ್.ಟಿ.ಸಿ ತರಬೇತಿ ಕೇಂದ್ರದ ತರಬೇತಿದಾರರು ಪಾಲ್ಗೊಂಡು ಗಮನ ಸೆಳೆದರು.
ಡೊಳ್ಳು ಕುಣಿತ ಕಲಾವಿದರು ಮೆರವಣಿಗೆ ವೇಳೆಯಲ್ಲಿ ಮೆರಗು ನೀಡಿದರು.