ಮಂಗಳೂರಿನಲ್ಲಿ ಆಟೋರಿಕ್ಷಾ ಮತ್ತು ಟಿಪ್ಪರ್ ಲಾರಿ ಢಿಕ್ಕಿ. ಓರ್ವ ಸಾವು.

Source: SO News | By Laxmi Tanaya | Published on 7th October 2020, 5:29 PM | Coastal News | Don't Miss |

ಮಂಗಳೂರು : ತಾಲೂಕಿನ ಮರೋಳಿ  ಬಳಿ ಬುಧವಾರ ಬೆಳಗ್ಗೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ  ಮೃತಪಟ್ಟಿದ್ದಾರೆ .

ಮಂಗಳೂರು ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಪಡೀಲ್ ಕಡೆಯಿಂದ ಬಂದ ರಿಕ್ಷಾ ಹತೋಟಿ ತಪ್ಪಿ ಹಿಂದಿನಿಂದ ಡಿಕ್ಕಿಯಾಗಿದೆ . ತೀವ್ರ ಗಾಯಗೊಂಡ ರಿಕ್ಷಾ ಚಾಲಕ ವಲಾಚಿಲ್ ಮೂಲದ  ಸಲೀಂ (40) ಎಂಬವರನ್ನು  ಆಸ್ಪತ್ರೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ .

ಇನ್ನೂ ರಿಕ್ಷಾದಲ್ಲಿದ್ದ ಇಬ್ಬರು ಮತ್ತು ಪಾದಚಾರಿ ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಜಾಮುದ್ದೀನ್ , ಸಿಯಾಬ್ ಮತ್ತು ಪಾದಚಾರಿ ಗಾಯಗೊಂಡವರಾಗಿದ್ದಾರೆ. ಆಟೋ ಮಲ್ಪೆ ಕಡೆ ತೆರಳುತಿತ್ತು.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...