ಜು.೨೫, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ

Source: sonews | By Staff Correspondent | Published on 24th July 2018, 6:45 PM | Coastal News | Don't Miss |

ಭಟ್ಕಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಕುರಿತಂತೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರವನ್ನು ಬುಧವಾರ ನಗರದ ತಂಝೀಮ್ ಕಾರ್ಯಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ಆಯೋಜಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ    ವಿಸ್ತರಣಾಧಿಕಾರಿ ಶಮ್ಸುದ್ದೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳಾದ ವಿದ್ಯಾರ್ಥಿ ವೇತನ, ಶಾದಿಭಾಗ್ಯ, ವಿದ್ಯಾಸಿರಿ, ವಿದ್ಯಾರ್ಥಿನಿಲಯಗಳ  ಸೌಲಭ್ಯ, ಕೌಶಲ್ಯ ತರಬೇತಿ, ಸಮುದಾಯದ ಅಭಿವೃದ್ಧಿ ಕಾರ್ಯಕ್ರಮ, ಹಾಗೂ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ, ಇತ್ಯಾದಿಗಳ ಬಗ್ಗೆ   ಕಾರ್ಯಕ್ರಮದಲ್ಲಿ ಅರಿವು ಮೂಡಿಸಲಾಗುತ್ತಿದ್ದು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...