ಆಜಾದಿ ಕಾ ಅಮೃತ ಮಹೋತ್ಸವ ಫಿಟ್ ಇಂಡಿಯಾ ಫ್ರೀಡಂ ರನ್ 2.0

Source: SO News | By Laxmi Tanaya | Published on 15th September 2021, 8:13 AM | State News | Don't Miss |

ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಇಂದು ಧಾರವಾಡ ನಗರದಲ್ಲಿ ಯಶಸ್ವಿಯಾಗಿ ಜರುಗಿತು.

 ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಜಿಗಳೂರ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ಫಿಟ್ ಇಂಡಿಯಾ ರನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹಸಿರು ನಿಶಾನೆ ತೋರಿಸಿ ,ಚಾಲನೆ ನೀಡಿ ಮಾತನಾಡಿ, 

 ಆರೋಗ್ಯವೇ ಭಾಗ್ಯ ಎನ್ನುವುದು ಸರ್ವಕಾಲಿಕವಾದುದು.ವಿದ್ಯಾರ್ಥಿ,ಯುವಜನರು ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆ ವ್ಯಾಯಾಮ,ದೈಹಿಕ ಚಟುವಟಿಕೆಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣ ಮತ್ತು ದೈಹಿಕ ಚಟುವಟಿಕೆಗೆ  ಪರಸ್ಪರ ಪೂರಕವಾಗಿ ಸಮಾನ ಪ್ರಾಶಸ್ತ್ಯ ನೀಡಬೇಕು.ಇತ್ತೀಚೆಗೆ ನಡೆದ ಓಲಂಪಿಕ್ ಮತ್ತು ಪ್ಯಾರಾಲಂಪಿಕ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದಾರೆ ಅವರಿಂದ ಸ್ಫೂರ್ತಿ ಪಡೆಯಬೇಕು ಎಂದರು.

 ಕಾಲೇಜು ರಸ್ತೆ, ಆಲೂರು ವೆಂಕಟರಾವ್ (ಜ್ಯುಬಿಲಿ)ವೃತ್ತ, ಹಳೆಯ ಎಸ್.ಪಿ.ವೃತ್ತ, ಬೇಂದ್ರೆ ಭವನ  ಮಾರ್ಗವಾಗಿ ಸಾಧನಕೇರಿ ಉದ್ಯಾನವನದವರೆಗೆ ವಿದ್ಯಾರ್ಥಿಗಳೊಂದಿಗೆ ಓಟದ ಮೂಲಕ ಜಾಥಾ ತಲುಪಿತು. ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

 ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ,ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಎಂ.ಗೌತಮರೆಡ್ಡಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡಿ.ಡೊಳ್ಳಿನ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೋ.ಬಿ.ಎಸ್.ಪಾಟೀಲ,ಜಿಗಳೂರ ಮಹಿಳಾ ಕಾಲೇಜು ಪ್ರಾಚಾರ್ಯೆ ಪ್ರೋ.ಗಿರಿಜಾ ಯಾಬಣ್ಣವರ, ಎನ್.ಎಸ್.ಎಸ್.ಅಧಿಕಾರಿ ಶಕುಂತಲಾ ಬಿರಾದಾರ, ಡಾ.ಬಸವರಾಜ ತಲ್ಲೂರ ಸೇರಿದಂತೆ ಎನ್.ಎಸ್.ಎಸ್ . ಸ್ವಯಂ ಸೇವಕರು ಮತ್ತಿತರರು ಭಾಗವಹಿಸಿದ್ದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...