ಭಟ್ಕಳ: ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಭಟ್ಕಳ ತಾಲೂಕಿನ ಅರಣ್ಯವಾಸಿಗಳಿಗೆ ಸಾಗುವಳಿ ಕ್ಷೇತ್ರಕ್ಕೆ ಆತಂಕ ಆಗಿರುವ ಹಿನ್ನೆಲೆಯಲ್ಲಿ, ನವೆಂಬರ್ 3 ರಂದು ಚರ್ಚೆ ನಡೆಯಲಿದೆ.
ಅಂದು ಮುಂಜಾನೆ 10 ಗಂಟೆಗೆ ಸ್ಥಳೀಯ ಸತ್ಕಾರ್ ಹೋಟೇಲ್ನಲ್ಲಿ ಅರಣ್ಯವಾಸಿ ಅತಿಕ್ರಮಣದಾರರೊಂದಿಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಭೇಟಿ ನೀಡಿ ಚರ್ಚಿಸಲಿದ್ದಾರೆ.
ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ನಷ್ಟಕ್ಕೆ ಒಳಗಾದ ಸ್ಥಳಗಳಿಗೆ ಭೇಟಿನೀಡಿ ಪರಿಶೀಲಿಸುವ ಸಂದರ್ಭದಲ್ಲಿ ಆಸಕ್ತ ಅರಣ್ಯ ಅತಿಕ್ರಮಣದಾರರು ಉಪಸ್ಥಿತರಿರಬೇಕೆಂದು ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.