ಸಪ್ಟೆಂಬರ್ 28 ರಂದು ಕರ್ನಾಟಕ ಬಂದ್ ಹಿನ್ನೆಲೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 29 ಕ್ಕೆ.
ಬೆಂಗಳೂರು : ಸಪ್ಟೆಂಬರ್ 28 ರಂದು ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮುಂದೂಡಿದೆ.
28 ರಂದು ರೈತ ಸಂಘಗಳು ಮತ್ತು ಇತರೆ ಸಂಘಟನೆಗಳು ರಾಜ್ಯವ್ಯಾಪ್ತಿ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂದು ನಡೆಯಬೇಕಾಗಿದ್ದ ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಯನ್ನು ದಿನಾಂಕ 29-09-2020 ರಂದು ನಡೆಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಾದ ವಿ ಸುಮಂಗಲ ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ