10 ಲಕ್ಷಕ್ಕೂ ಅಧಿಕ ಮುಸ್ಲಿಮ ಮತದಾರರು ನಾಪತ್ತೆ!

Source: sonews | By Staff Correspondent | Published on 27th March 2018, 4:48 PM | State News | National News | Special Report | Don't Miss |

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಕರ್ನಾಟಕದಲ್ಲಿ ಮತ ಚಲಾಯಿಸಲು ಅರ್ಹರಾದ ಹತ್ತು ಲಕ್ಷಕ್ಕೂ ಅಧಿಕ ಮುಸ್ಲಿಮರ ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿರುವ ಆಘಾತಕಾರಿ ಅಂಶವನ್ನು ದಿಲ್ಲಿ ಮೂಲದ ಸಂಸ್ಥೆಯೊಂದು ಬಯಲು ಮಾಡಿದೆ.

ದಿಲ್ಲಿ ಮೂಲದ ನೀತಿ ಅಭಿವೃದ್ಧಿ ಸಂಶೋಧನೆ ಮತ್ತು ಸಮಾಲೋಚನೆ ಕೇಂದ್ರವು (ಸಿಆರ್‌ಡಿಡಿಪಿ) ನಡೆಸಿದ ಅಧ್ಯಯನದ ವರದಿಯ ಪ್ರಕಾರ, ಸಂಸ್ಥೆಯು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿದ ಪ್ರಾಥಮಿಕ ವಿಶ್ಲೇಷಣೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಅರ್ಹ ಮುಸ್ಲಿಮರ ಹೆಸರುಗಳು ಮತದಾರರ ಪಟ್ಟಿಯಲ್ಲಿಲ್ಲ ಮತ್ತು ಅವರ ಬಳಿ ಮತದಾರರ ಗುರುತಿನ ಚೀಟಿ ಕೂಡಾ ಇಲ್ಲ ಎಂಬುದು ತಿಳಿದುಬಂದಿದೆ.

ಸಂಸ್ಥೆಯು ಬೆಂಗಳೂರಿನ ಶಿವಾಜಿನಗರ, ಪುಲಕೇಶಿನಗರ (ಮುಸ್ಲಿಂ ಬಾಹುಳ್ಯದ ಫ್ರೇಝರ್ ಟೌನ್ ಸೇರಿದಂತೆ), ಹೆಬ್ಬಾಳ (ಅನೇಕ ಮುಸ್ಲಿಂ ಪ್ರದೇಶಗಳೂ ಸೇರಿ), ಜಯನಗರ, ಪದ್ಮನಾಭನಗರ, ಟಿ.ಎಂ ಲೇಔಟ್ ಹಾಗೂ ಹುಬ್ಬಳ್ಳಿ ಪೂರ್ವ ಮತ್ತು ಕೋಲಾರ ಮುಂತಾದ ಎಂಟು ವಿಧಾನಸಭಾ ಕ್ಷೇತ್ರಗಳ್ಲಲಿ ಅಂಕಿಅಂಶ ವಿಶ್ಲೇಷಣೆಯನ್ನು ಸಂಪೂರ್ಣಗೊಳಿಸಿದೆ. ಈ ವಿಶ್ಲೇಷಣೆಯಲ್ಲಿ 65,258 ಕುಟುಂಬಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನಮೂದಿಸಲಾಗದ ವಯಸ್ಕ ವ್ಯಕ್ತಿಗಳು ಇರುವುದು ಪತ್ತೆಯಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಬುಸಲೇಹ್ ಶರೀಫ್ ತಿಳಿಸಿದ್ದಾರೆ.

ಶಿವಾಜಿನಗರದಲ್ಲಿ 18,453 ಕುಟುಂಬಗಳನ್ನು ಗುರುತಿಸಲಾಗಿದ್ದು, ಈ ಪೈಕಿ 8,795 ಕುಟುಂಬಗಳಲ್ಲಿ ಕೇವಲ ಪ್ರತಿ ಮನೆಯಲ್ಲಿ ತಲಾ ಒಬ್ಬರ ಹೆಸರು ಮಾತ್ರ ಮತದಾರರ ಪಟ್ಟಿಯಲ್ಲಿದೆ. ಆಶ್ಚರ್ಯವೆಂದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಬ್ಬ ವ್ಯಕ್ತಿಯಿರುವ ಕುಟುಂಬಗಳ ಪ್ರಮಾಣ ಶೇ.4.2 ಮಾತ್ರ. ಇದನ್ನು ಪರಿಗಣಿಸಿದರೆ, 790 ಮನೆಗಳಲ್ಲಿ ಮಾತ್ರ ಒಬ್ಬ ಮತದಾರ ಇರಬೇಕಿತ್ತು. ಶಿವಾಜಿನಗರ ಒಂದರಲ್ಲೇ ಸುಮಾರು 8,002 ಮುಸ್ಲಿಂ ಕುಟುಂಬಗಳಲ್ಲಿ ನೋಂದಾಯಿಸಲಾಗದ ವಯಸ್ಕರು ಇದ್ದಾರೆ ಎಂದು ವರದಿ ತಿಳಿಸಿದೆ. ಸಿಆರ್‌ಡಿಡಿಪಿಯು ಮುಸ್ಲಿಂ ಮತದಾರರು ಎಂಬ ಆ್ಯಂಡ್ರಾಯ್ಡ್ ಆ್ಯಪನ್ನು ಅಭಿವೃದ್ಧಿಪಡಿಸಿದೆ. ನೋಂದಾವಣೆಗೊಳ್ಳದ ಮತದಾರರು ಈ ಆ್ಯಪ್‌ನಲ್ಲಿ ತಮ್ಮ ವಿಳಾಸವನ್ನು ಸರಿಯಾಗಿ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಹಾಕಬಹುದು ಮತ್ತು ಗುರುತಿನ ಚೀಟಿಯನ್ನು ಪಡೆಯಬಹುದು ಎಂದು ಅಬುಸಲೇಹ್ ತಿಳಿಸಿದ್ದಾರೆ. ಸಿಆರ್‌ಡಿಡಿಪಿಯು ಎಲ್ಲ 224 ಕ್ಷೇತ್ರಗಳ ವಿಶ್ಲೇಷಣೆಯನ್ನು ಸಂಪೂರ್ಣಗೊಳಿಸಲಿದೆ. ನಂತರ ಎಲ್ಲ ನಾಪತ್ತೆಯಾಗಿರುವ ಮತದಾರರು ತಮ್ಮ ಹೆಸರುಗಳನ್ನು ಆ್ಯಂಡ್ರಾಯ್ಡ್ ಆ್ಯಪ್ ಅಥವಾ ಜಾಲತಾಣದ ಮೂಲಕ ನಮೂದಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ಸ್ವಯಂಸೇವಕರು ಈ ಕಾರ್ಯದಲ್ಲಿ ತನ್ನ ಜೊತೆ ಕೈಜೋಡಿಸುವಂತೆ ಸಿಆರ್‌ಡಿಡಿಪಿ ಮನವಿ ಮಾಡಿದೆ. ಪ್ರತಿಯೊಬ್ಬ ಸ್ವಯಂಸೇವಕನಿಗೂ 20ರಿಂದ 25 ಕುಟುಂಬಗಳ ಅರ್ಹ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ಜವಾಬ್ದಾರಿಯನ್ನು ನೀಡಲಾಗುವುದು. ಮನೆಮನೆಗಳಿಗೆ ಭೇಟಿ ನೀಡುವ ಕಾರ್ಯಕರ್ತರು ಮತದಾರರ ಗುರುತಿನ ಚೀಟಿಗಾಗಿ ಹೊಸದಾಗಿ ಅರ್ಜಿ ಹಾಕುವವರ ಮೊಬೈಲ್ ಸಂಖ್ಯೆಯನ್ನು ಆ್ಯಪ್ ಮೂಲಕ ನಮೂದಿಸಲಿದ್ದಾರೆ ಎಂದು ಅಬುಸಲೇಹ್ ತಿಳಿಸಿದ್ದಾರೆ. ಈ ಆ್ಯಪನ್ನು ಮಾರ್ಚ್ 17ರ ತನಕ 6,000 ಕಾರ್ಯಕರ್ತರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಸಿಆರ್‌ಡಿಡಿಪಿ ಈಗಾಗಲೇ 3,026 ಕಾರ್ಯಕರ್ತರನ್ನು ಪರೀಕ್ಷಾರ್ಥವಾಗಿ ಅಭಿಯಾನದಲ್ಲಿ ತೊಡಗಿಸಿದೆ. ಈ ಕಾರ್ಯಕರ್ತರು ಪ್ರತಿಮನೆಗೆ ತೆರಳಿ ನೋಂದಾವಣೆಯಾಗದ ಮತದಾರರು ತಮ್ಮ ಗುರುತಿನ ಚೀಟಿ ಪಡೆಯಲು ಸಹಾಯ ಮಾಡಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬುಸಲೇಹ್ ತಿಳಿಸಿದ್ದಾರೆ.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...