ಬೆಂಗಳೂರು: ಅಮೇರಿಕಾದಲ್ಲಿ ಕಾರ್ಮಿಕ ವೀಸಾ ಸಮಸ್ಯೆ ಎದುರಿಸುತ್ತಿರುವವರಿಗೆ ನೆರವು ನೀಡಲು ಮನವಿ ಸಲ್ಲಿಕೆ

Source: varthabhavan | By Arshad Koppa | Published on 15th September 2017, 1:05 PM | National News | Don't Miss |

ವಿದೇಶದಲ್ಲಿ ವ್ಯಾಸಂಗ ಮಾಡಲು ಶೈಕ್ಷಣ ಕ ಸಾಲ ಪಡೆದು ಅಮೇರಿಕಾಗೆ ತೆರಳುತ್ತಿರುವ ಕರ್ನಾಟಕದ ಯುವಕರು ವಿದ್ಯಾಭ್ಯಾಸದ ನಂತರ ಅಲ್ಲಿಯೇ ಉದ್ಯೋಗ ಕಂಡುಕೊಂಡು ಆ ಮುಖಾಂತರ ಶೈಕ್ಷಣಿಕ ಸಾಲವನ್ನ ತೀರಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅಂತಹ ಯುವಕರಿಗೆ ಸ್ಥಳೀಕವಾಗಿ ಕೆಲ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ಕೆಲಸಗಳು ದೊರಕಿಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿರುವ ಕುರಿತು ಹೆಚ್ಚು ದೂರುಗಳು ಕೇಳಿಬರುತ್ತಿತ್ತು, ಅದರಲ್ಲೂ ವಿಶೇಷವಾಗಿ ಕಾರ್ಮಿಕ ವೀಸಾ ಸಮಸ್ಯೆ. 

ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಾ. ಆರತಿ ಕೃಷ್ಣ, ಉಪಾಧ್ಯಕ್ಷರು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಸರ್ಕಾರ ಇವರು ದಿನಾಂಕ 12-09-2017ರಂದು ಅಮೇರಿಕಾದ ವಿದೇಶಾಂಗ ವ್ಯವಹಾರಗಳ ಅಧ್ಯಕ್ಷರು ಹಾಗೂ ಕಾಂಗ್ರೆಸ್‍ಮನ್ ಆದ ಶ್ರೀಯುತ ಎಡ್ ರಾಯ್ಸ್ ರವರನ್ನ ಅವರ ಕ್ಯಾಲಿಫೋರ್ನಿಯಾದ ಅಲೆಕ್ಸಾಂಡ್ರಿಯಾ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಅನಿವಾಸಿ ಭಾರತೀಯ/ಕನ್ನಡಿಗ ಯುವಕರ ಸಮಸ್ಯೆಗೆ ಸೂಕ್ತ ಆಡಳಿತಾತ್ಮಕ ಪರಿಹಾರ ಹಾಗೂ ಅನಿವಾಸಿ ಕನ್ನಡಿಗರೊಂದಿಗೆ ವಿವಾಹವಾದ ಸಂಧರ್ಭದಲ್ಲಿ ವಿವಾಹಿತ ಹೆಣ್ಣು ಮಕ್ಕಳಿಗೆ ವೀಸಾವನ್ನು ಶೀಘ್ರಗತಿಯಲ್ಲಿ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಅಮೇರಿಕಾದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್‍ರವರ ಸಲಹೆಗಾರರಾದ ಶ್ರೀಯುತ ಕೆ.ವಿ.ಕುಮಾರ್ ಹಾಗೂ ಅನಿವಾಸಿ ಭಾರತೀಯ ಸಮುದಾಯದ ಇತರೆ ಮುಖಂಡರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
 
                                                                    
ಆಪ್ತ ಕಾರ್ಯದರ್ಶಿ,
ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ,
 ವಿಕಾಸಸೌಧ, ಬೆಂಗಳೂರು

ಕರ್ನಾಟಕ ಸರ್ಕಾರ
ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ,                          
ದೂರವಾಣ : 080-22374818
ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ,    
22035076
ವಿಕಾಸಸೌಧ, ಬೆಂಗಳೂರು.                               
 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...