ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿ ಸಿಂದಗಿ ಮೂಲದ ಪರಶುರಾಮ್ (26) ಎಂದು ತಿಳಿದುಬಂದಿದೆ.
ಆರೋಪಿಯನ್ನು ಮೂರನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ ಎಸ್.ಐ.ಟಿ, 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.
ಮನೋಹರ್ ಯಡವೇ ಎಂಬಾತ ನೀಡಿದ ಮಾಹಿತಿ ಅಧರಿಸಿ ಪರಶುರಾಮ್ ವಾಗ್ಮೋರೆ ಹಾಗೂ ಪರಮೇಶ್ ರನ್ನ ಈ ಹಿಂದೆ ವಶಕ್ಕೆ ಪಡೆದಿದ್ದ ಎಸ್.ಐ.ಟಿ, ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆಯ ಪಾತ್ರ ಕಂಡುಬಂದ ಹಿನ್ನಲೆಯಲ್ಲಿ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.