ಸೌಂದರ್ಯ ಲಹರಿ ಪಠಣದಿಂದ ಜ್ಞಾನ, ಸ್ವಾಸ್ತ್ಯ, ಧನ ಪ್ರಾಪ್ತ- ನರೇಂದ್ರ ಮೋದಿ

Source: sonews | By Staff Correspondent | Published on 29th October 2017, 9:48 PM | Coastal News | State News | National News | Don't Miss |

ಬೆಂಗಳೂರು: ಸೌಂದರ್ಯ ಲಹರಿ ಪಠಣದಿಂದ ಜ್ಞಾನ, ಸ್ವಾಸ್ತ್ಯ, ಧನ ಎಲ್ಲವು ಸಿಗುತ್ತದೆ. ಇದೇ ಸಂಸ್ಕೃತಿಯನ್ನು ನಮ್ಮ ಸರಕಾರದ ‘ನವ ಭಾರತ’ದ ಕಲ್ಪನೆ ಯೊಂದಿಗೆ ಜೋಡಿಸಲಾಗಿದೆ. ಎಲ್ಲರನ್ನೂ ಜೊತೆಗೆ ಕರೆದೊಯ್ಯುವ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರದ ಮೇಲೆ ವಿಶ್ವಾಸವಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 

ರವಿವಾರ ನಗರದ ಅರಮನೆ ಮೈದಾನದಲ್ಲಿ ಯಡತೋರೆ ಮಠದ ಶಂಕರ ಭಾರತಿ ಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ‘ದಶಮ ಸೌಂದರ್ಯ ಲಹರಿ ಪಾರಾಯಣೋತ್ಸವ ಮಹಾ ಸರ್ಮಪಣೆ’ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸೌಂದರ್ಯ ಲಹರಿಯ ಮಂತ್ರಗಳಲ್ಲಿ ಶಕ್ತಿ, ಭಾವವಿದೆ. ನಾನು ಅನೇಕ ವರ್ಷಗಳಿಂದ ನವರಾತ್ರಿಯನ್ನು ಆಚರಿಸುತ್ತಿದ್ದು, ಅದರಲ್ಲಿ ಸೌಂದರ್ಯ ಲಹರಿಗೂ ಒಂದು ಸ್ಥಾನವಿದೆ. ಸೌಂದರ್ಯ ಲಹರಿಗೆ 10 ವರ್ಷ ಪೂರೈಸುತ್ತಿರುವುದಕ್ಕೆ ನಿಮಗೆಲ್ಲ ಅಭಿನಂದನೆಗಳು ಎಂದು ಹೇಳಿದರು.

ಕೇದಾರನಾಥಕ್ಕೆ ನಾನು ಕಳೆದ 8-10 ದಿನಗಳ ಹಿಂದೆ ಹೋಗಿದ್ದೆ. ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅಲ್ಲಿಗೆ ಭೇಟಿ ನೀಡಲು ಕಷ್ಟವಾಗುತ್ತದೆ. ಆದರೆ, ಆದಿ ಶಂಕರಾಚಾರ್ಯರು ಈ ಸ್ಥಳಕ್ಕೆ ಸಾವಿರಾರು ವರ್ಷಗಳ ಹಿಂದೆ ಹೇಗೆ ಬಂದಿರಬಹುದು. ಬರಿಗಾಲಿನಲ್ಲಿ ದೇಶವನ್ನು ಮೂರು ಬಾರಿ ಸುತ್ತಿದ್ದಾರೆ. ದೇಶದ ನಾಲ್ಕು ಭಾಗಗಳಲ್ಲಿ ಮಠಗಳನ್ನು ನಿರ್ಮಿಸಿ, ದೇಶವನ್ನು ಒಂದುಗೂಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಸಂಸ್ಕೃತಿಯಲ್ಲಿ ಸೇರಿಕೊಂಡಿದ್ದ ತಪ್ಪು ಆಚರಣೆಗಳನ್ನು ಅವರು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದರು. ಅಲ್ಲದೆ, ಮುಂದಿನ ಪೀಳಿಗೆಯು ಆ ತಪ್ಪು ದಾರಿಯಲ್ಲಿ ಹೋಗುವುದನ್ನು ತಡೆಯಲು ಪ್ರಯತ್ನಿಸಿದ್ದರು. ಜನರನ್ನು ಜ್ಞಾನ, ಭಕ್ತಿಯ ಮಾರ್ಗದಲ್ಲಿ ನಡೆಸಲು ಪ್ರೇರೆಪಿಸಿದರು. ಅಲ್ಲದೆ, ಮುಂದಿನ ಪೀಳಿಗೆಗಾಗಿ ಸೌಂದರ್ಯ ಲಹರಿಯ ರಚನೆ ಮಾಡಿದರು ಎಂದು ಹೇಳಿದರು.

ಆದಿ ಶಂಕರಾಚಾರ್ಯರ ಸಂದೇಶವನ್ನು ಜನರಿಗೆ ತಲುಪಿಸುವಲ್ಲಿ ಶಂಕರ ಭಾರತಿ ಸ್ವಾಮಿ ತಮ್ಮ ಜೀವನವನ್ನು ಸಮರ್ಪಿಸಿದ್ದಾರೆ. ಇಡೀ ವಿಶ್ವವನ್ನು ಒಂದು ಕುಟುಂಬ ಎಂದು ಭಾವಿಸಿ, ಆತ್ಮಭಾವದಿಂದ ಶಂಕರಚಾರ್ಯರ ಸಂದೇಶವನ್ನು ವೇದಾಂತ ಭಾರತೀಯ ಮೂಲಕ ಜನರಿಗೆ ತಲುಪಿಸುತ್ತಿದ್ದಾರೆ ಎಂದು  ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವವು ಎದುರಿಸುತ್ತಿರುವ ಅನೇಕ ಜಟಿಲ ಸಮಸ್ಯೆಗಳಿಗೆ ನಮ್ಮ ಸಂಸ್ಕೃತಿ, ಪರಂಪರೆಯಲ್ಲಿ ಪರಿಹಾರವಿದೆ. ಯಾರು ಯಾರ ವಿರುದ್ಧವು ದ್ವೇಷ ಮಾಡಬಾರದು ಎಂಬುದು ನಮ್ಮ ಸಂಸ್ಕೃತಿ. ನಮ್ಮ ಪರಂಪರೆಯನ್ನು ನಾಶ ಮಾಡಲು ಪ್ರಯತ್ನಗಳು ನಡೆದವು. ಆದರೆ, ಸಾವಿರಾರು ವರ್ಷಗಳ ಈ ಭವ್ಯ ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದರು.

ಇವತ್ತಿನ ಯುವಕರು ಮೊಬೈಲ್‌ನಲ್ಲಿ ಎಲ್ಲವನ್ನು ಓದುತ್ತಾರೆ. ಪುಸ್ತಕಗಳಲ್ಲಿ ಇರುವ ಜ್ಞಾನದ ಬಗ್ಗೆ ಅವರಿಗೆ ಹೇಗೆ ಗೊತ್ತಾಗಬೇಕು. ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಭಾರತೀಯ ಸಂಸ್ಕೃತಿ, ಋಷಿ, ಮುನಿಗಳ ಪರಿಚಯಿಸುತ್ತಿರುವ ಶಂಕರ ಭಾರತಿ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

‘ವಿವಿಧತೆಯಲ್ಲಿ ಏಕತೆ, ಭಾರತದ ವಿಶೇಷತೆ’ ಎನ್ನುತ್ತೇವೆ. ಆದರೆ, ನಾವು ಸಿಂಗಾಪುರದ ಬಗ್ಗೆ ತಿಳಿದುಕೊಂಡಷ್ಟು ಬಂಗಾಲದ ಬಗ್ಗೆ ಹಾಗೂ ದುಬೈ ಬಗ್ಗೆ ತಿಳಿದುಕೊಂಡಿರುವಷ್ಟು ಡೆಹ್ರಾಡೂನ್ ಬಗ್ಗೆ ತಿಳಿದು ಕೊಂಡಿರುವುದಿಲ್ಲ. ನಾವು ನಮ್ಮವರನ್ನೆ ಮರೆಯುತ್ತಿದ್ದೇವೆ. ಆದುದರಿಂದಲೇ, ನಮ್ಮ ಸರಕಾರ ‘ಏಕ್ ಭಾರತ್, ಶ್ರೇಷ್ಠ್ ಭಾರತ್’ ಅಭಿಯಾನವನ್ನು ಆರಂಭಿಸಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್‌ ಕುಮಾರ್, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ
ನನ್ನ ಪ್ರೀತಿಯ ಮಾತಾ, ಭಗಿನೀಯರೆ, ಸಹೋದರರೇ, ಈ ಸೌಂದರ್ಯ ಲಹರಿಯ ಮಹಾ ಸಮರ್ಪಣೆ ಮಾಡಲು ಬಂದಿರುವ ನಿಮಗೆಲ್ಲ ನಮಸ್ಕಾರಗಳು, ಪೂಜ್ಯ ಸ್ವಾಮಿಗಳಿಗೆ ನನ್ನ ಪ್ರಣಾಮಗಳು’ ಎಂದು ಕನ್ನಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...