ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ  ಶಾಸಕ ಸುನೀಲ್ ಗುಂಪಿಗೆ ಒಲಿದ ವಿಜಯ ಮಾಲೆ

Source: sonews | By Staff Correspondent | Published on 20th August 2018, 6:32 PM | Coastal News | Don't Miss |

ಭಟ್ಕಳ:ತಾಲೂಕಿನ ಪಿಎಲ್ಡಿ (ಕೃಷಿ ಹಾಗೂ ಗ್ರಾಮೀಣ ಭೂ ಅಭಿವೃದ್ದಿ ಬ್ಯಾಂಕ್) ಬ್ಯಾಂಕ್‌ನ ೧೫ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಬಿಜೆಪಿ ಬೆಂಬಲಿಗರು ೧೪ ಸ್ಥಾನಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ವಿಜಯಮಾಲೆಯನ್ನು ಧರಿಸಿಕೊಂಡಿದ್ದಾರೆ.

ಬೆಳಿಗ್ಗೆ ೯ರಿಂದ ಸಂಜೆ ೪ಗಂಟೆವರೆಗೆ ನಡೆದ ಮತದಾನದಲ್ಲಿ ಶೇ.೮೦ರಷ್ಟು ಮತದಾನವಾಯಿತು.೬೬೫೫ ಸಾಲಗಾರ ಮತದಾರರು,೧೦೯೭ ಸಾಲಗಾರ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರು.ಶಾಸಕ ಸುನೀಲ್ ನಾಯ್ಕ ಅತಿ ಹೆಚ್ಚು ೩೧೫೬ ಮತ ಪಡೆದು ಆಯ್ಕೆಯಾಗುವ ಮೂಲಕ ತಮ್ಮ ಎಲ್ಲಾ ಬಿಜೆಪಿ ಬೆಂಬಲಿಗರನ್ನು ಆಯ್ಕೆ ಆಗುವಂತೆ ಮಾಡಿದರು. ಈರಪ್ಪ ಮಂಜಪ್ ನಾಯ್ಕ ಎಂಬ ಒಬ್ಬರು ಮಾತ್ರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಶಾಸಕ ಸುನೀಲ್ ನೇತೃತ್ವದ ಬಿಜೆಪಿ ಬೆಂಬಲಿಗರಾದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಈಶ್ವರ ನಾರಾಯಣ ನಾಯ್ಕ, ನವನೀತ ಗಣೇಶ ನಾಯ್ಕ ಗರ್ಡೀಕರ್, ಮಂಜಪ್ಪ ಮಾದೇವ ನಾಯ್ಕ, ಮಂಜುನಾಥ ದುರ್ಗಪ್ಪ ನಾಯ್ಕ, ಸಂತೋಷ ಮಾದೇವ ನಾಯ್ಕ, ಸುರೇಶ ಜಟ್ಟಯ್ಯ ನಾಯ್ಕ, ಸಾಲಗಾರರ  ಹಿಂದುಳಿದ 'ಅ'ವರ್ಗದಿಂದ ಮೋಹನ ಕೊರ್ಗಪ್ಪ ನಾಯ್ಕ, ಹರೀಶ ವೆಂಕಟೇಶ ನಾಯ್ಕ, ಮಹಿಳಾ ಮೀಸಲು ಕ್ಷೇತ್ರದಿಂದ ಕಮಲಾ ರಾಮಚಂದ್ರ ನಾಯ್ಕ, ಗಾಯತ್ರಿ ವಿಜಯಕುಮಾರ ನಾಯ್ಕ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಮಂಜು ಮಂಜು ಮೊಗೇರ್, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ನಾಗಯ್ಯ ಮಾಸ್ತಿ ಗೊಂಡ, ಸಾಲಗಾರರಲ್ಲದ ಕ್ಷೆತ್ರದಿಂದ ಈಶ್ವರ ಮಂಜುನಾಥ ನಾಯ್ಕ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರಿ ಅಧಿಕಾರಿ ಭಾಸ್ಕರ ನಾಯ್ಕ ಕಾರ್ಯನಿರ್ವಹಿಸಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...