ಬೆಂಗಳೂರು – ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆಯಂತೆ ಬೊಮ್ಮಾಯಿ ಅವರನ್ನ ಘೋಷಿಸಲಾಗಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸಚಿವ ಸಂಪುಟ ರಚನೆಯಾಗಲಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೊಮ್ಮಾಯಿ, ರಾಜ್ಯಪಾಲರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.
ಬಳಿಕ ಮಾದ್ಯಮದವರೊಂದಿಗೆ ಮಾತನಾಡಿ, ನನ್ನ ರಾಜಕೀಯ ಗುರುಗಳಾದ ಬಿ ಎಸ್ ಯಡಿಯೂರಪ್ಪ ಅವರ ತ್ಯಾಗದಿಂದ ತಾನು ಸಿಎಂ ಆಗಿದ್ದೇನೆ. ಅವರ ಸಲಹೆಯಂತೆ ಉತ್ತಮ ಆಡಳಿತ ನೀಡುತ್ತೇನೆಂದು ಹೇಳಿದ್ದಾರೆ.