ಭಾರೀ ಸ್ಫೋಟಕ್ಕೆ ತತ್ತರಿಸಿದ ಬೈರುತ್ : 100ಕ್ಕೂ ಹೆಚ್ಚು ಬಲಿ, ಸಾವಿರಾರು ಮಂದಿಗೆ ಗಾಯ..!

Source: PTI | Published on 5th August 2020, 8:03 PM | National News | Don't Miss |

ಬೈರುತ್ಲೆ:ಬನಾನ್ ರಾಜಧಾನಿ ಬೈರುತ್‍ನಲ್ಲಿ ನಿನ್ನೆ ಸಂಭವಿಸಿದ ಭಾರೀ ಅವಳಿ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಬಲಿಯಾಗಿ, ಸುಮಾರು 4,000 ಜನರು ಗಾಯಗೊಂಡಿದ್ದಾರೆ.
ಈ ವಿನಾಶಕಾರಿ ಸ್ಫೋಟಕ್ಕೆ ಉಗ್ರಗಾಮಿಗಳ ದಾಳಿ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಸದಾ ಅಂತರಿಕ ಕಲಹ ಮತ್ತು ರಾಜಕೀಯ ಬಿಕ್ಕಟ್ಟಿನಿಂದ ನಲುಗುತ್ತಿರುವ ಲೆಬನಾನ್‍ನಲ್ಲಿ ನಿನ್ನೆ ನಡೆದ ಭಾರೀ ಸ್ಪೋಟದಿಂದ ಜನರ ಭಯಭೀತರಾಗಿದ್ದಾರೆ.
ರಾಜಧಾನಿಯ ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ಹೋಗಿದ್ದು, ಅವರ ಕುಟುಂಬದವರು ಮತ್ತು ಬಂಧುಮಿತ್ರರ ಆಕ್ರಂದನ ಮುಗಿಲು ಮುಟ್ಟಿದೆ.
ಈ ದುರ್ಘಟನೆಯಲ್ಲಿ ಸುಮಾರು 4000 ಮಂದಿ ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ.
ಸ್ಫೋಟದಿಂದ ನೂರಾರು ಗಾಯಾಳುಗಳಿಗೆ ಭಾರೀ ಪ್ರಮಾಣದಲ್ಲಿ ರಕ್ತಸ್ರಾವವಾಗಿದೆ. ರಕ್ತದಾನ ಮಾಡುವಂತೆ ಆಸ್ಪತ್ರೆಗಳ ವೈದ್ಯರು ಜನರಲ್ಲಿ ಮನವಿ ಮಾಡಿದ್ಧಾರೆ. ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ದಾಗುವ ಆತಂಕವಿದೆ.
ಸ್ಪೋಟದ ತೀವ್ರಗೆಗೆ ಬೈರುತ್‍ನ ಐತಿಹಾಸಿಕ ಕೋಟೆ ಕೊತ್ತಲಗಳು ಮತ್ತು ಪ್ರಸಿದ್ಧ ಸ್ಮಾರಕಗಳಿಗೆ ಹಾನಿಯಾಗಿದ್ದು, ಅನೇಕ ಕಟ್ಟಡಗಳು ಧ್ವಂಸಗೊಂದಿದ್ದು, ಸಾವಿರಾರು ಮನೆಗಳಿಗೆ ಹಾನಿಯಾಗಿಸವೆ.
ಬೈರತ್ ನಗರದ ಅರ್ಧಕ್ಕಿಂತಲೂ ಹೆಚ್ಚು ಭಾಗ ನಿರ್ನಾಮಗೊಂಡಿದೆ. ಸುಮಾರು 200 ಕಿ.ಮೀ. ದೂರದವರೆಗೂ ಶಬ್ಧ ಕೇಳಿಸುವಷ್ಟು ಭಾರೀ ಸ್ಪೋಟದ ತೀವ್ರತೆ ಇತ್ತು.
ಬಂದರು ಸಮೀಪದಲ್ಲೇ ನಡೆದ ಸ್ಫೋಟದಿಂದ ಭುಗಿಲೆದ್ದ ಅಗ್ನಿ ಜ್ವಾಲೆಗಳು ಮುಗಿಲೆತ್ತರಕ್ಕೆ ರಾಚಿತು. ಈ ಸ್ಫೋಟದ ತೀವ್ರತೆಗೆ ಸಮುದ್ರದ ನೀರು ನೂರಾರು ಮೀಟರ್‍ಗಳ ಎತ್ತರ ಮತ್ತು ದೂರಕ್ಕೆ ಚಿಮ್ಮಿದ ದೃಶ್ಯಗಳು ವಿಡಿಯೋದಲ್ಲಿವೆ.
ಅವಳಿ ಸ್ಫೋಟದ ನಂತರ ಆಗಸಕ್ಕೆ ಏರಿದ ಬೆಂಕಿಯ ಜ್ವಾಲೆಗಳು ಮತ್ತು ದಟ್ಟ ಹೊಗೆ ಅಣುಬಾಂಬ್ ಸ್ಫೋಟದಂಥ ದೃಶ್ಯವನ್ನು ನೆನೆಪಿಸುವಂತಿದೆ.ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದ್ದು, ಇಡೀ ನಗರದಲ್ಲಿ ಭದ್ರತಾಪಡೆಗಳು ವಾಸ್ತವ್ಯ ಹೂಡಿವೆ. ಸೇನಾ ಹೆಲಿಕಾಪ್ಟರ್‍ಗಳನ್ನು ತುರ್ತು ಸೇವೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ.
ಭಯೋತ್ಪಾದನೆ ಕೃತ್ಯ ಶಂಕೆ: ಬೈರುತ್‍ನಲ್ಲಿ ನಡೆದ ಭಾರೀ ಸ್ಪೋಟಕ್ಕೆ ನಿಖರವಾದ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ ಈ ಅವಳಿ ಸ್ಪೋಟಕ್ಕೆ ಉಗ್ರಗಾಮಿಗಳ ಕೃತ್ಯ ಕಾರಣ ಎಂಬ ಸಂಶಯ ಬಲವಾಗಿದೆ.
ಬೈರುತ್‍ನಲ್ಲಿ ನಡದ ಭಾರೀ ಸ್ಪೋಟಕ್ಕೆ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರ್ರೆಸ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಅನೇಕ ನಾಯಕರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...