ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣ; ಬನ್ನಂಜೆ ರಾಜಾ ಸಹಿತ 9 ಮಂದಿ ದೋಷಿ ಎಂದ ಕೋರ್ಟ್; ಎ.4ರಂದು ಶಿಕ್ಷೆ ಪ್ರಮಾಣ ಪ್ರಕಟ

Source: Vb | By I.G. Bhatkali | Published on 31st March 2022, 6:45 AM | Coastal News | State News |

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ 9 ಮಂದಿ ದೋಷಿಗಳು ಎಂದು ಘೋಷಿಸಿದೆ. ಎಪ್ರಿಲ್ 4ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

ಆರೋಪಿ ಬನ್ನಂಜೆ ರಾಜಾ ಪ್ರಸಕ್ತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಆತನ ಮೇಲೆ ಒಟ್ಟು 48 ಉಡುಪಿ, ಮಂಗಳೂರು, ಉತ್ತರ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾತ್ರವಲ್ಲದೆ ಕೇರಳದಲ್ಲಿಯೂ ಹಫ್ತಾ ವಸೂಲಿ, ಸುಲಿಗೆ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣಗಳಿವೆ. ಆರ್.ಎನ್.ನಾಯಕ್ ಅವರನ್ನು 2013ರಲ್ಲಿ ಸುಪಾರಿ ನೀಡಿ ಕೊಲೆ ಮಾಡಿಸಿದ ಪ್ರಕರಣ ಈ ಪೈಕಿ ಅತ್ಯಂತ ಪ್ರಮುಖವಾಗಿದೆ.

ರಾಜಾನನ್ನು ಮೊರೊಕ್ಕೊದಲ್ಲಿ 2015 ಫೆಬ್ರವರಿ 12ರಂದು ನಕಲಿ ಪಾಸ್‌ಪೋರ್ಟ್ ಹೊಂದಿದ ಆರೋಪದಡಿ ಬಂಧಿಸಿದ್ದು, ಬಳಿಕ ಗಡಿಪಾರು ಮಾಡಲಾಗಿ ತ್ತು. ಅದೇ ವರ್ಷ ಆಗಸ್ಟ್ 14ರಂದು ಭಾರತಕ್ಕೆ ಕರೆತರಲಾಗಿತ್ತು. ಬೆಳಗಾವಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಚಾರಣೆಗಾಗಿ ಬೆಂಗಳೂರು, ಉಡುಪಿ ಹಾಗೂ ಮಂಗಳೂರಿಗೆ ಕರೆತರಲಾಗಿತ್ತು.

ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ದಂಧೆಯಲ್ಲಿ ತೊಡಗಿದ್ದ ಬನ್ನಂಜೆ ರಾಜಾ ಆರ್. ಎನ್. ನಾಯಕ್ ಅವರಿಗೆ 3 ಕೋಟಿ ರೂ. ಹಣ್ಣಾ ಹಣ ನೀಡುವಂತೆ ಬೆದರಿಸಿದ್ದ. ಹಣ ನೀಡಲು ನಿರಾಕರಿಸಿದ್ದರಿಂದ 2013 ಡಿಸೆಂಬರ್ 21ರಂದು ಅವರನ್ನು ಕೊಲೆ ಮಾಡಿಸಿದ್ದ ಆರೋಪ ಎದುರಿಸುತ್ತಿದ್ದನು.

ಈ ಕೊಲೆ ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಬನ್ನಂಜೆ ರಾಜಾ ಸೇರಿದಂತೆ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿ ದ್ದು, ಸದ್ಯ ಬನ್ನಂಜೆ ರಾಜಾ ಜೈಲಿನಲ್ಲಿದ್ದಾನೆ. ಈ ಪ್ರಕರಣದಲ್ಲಿ ಬನ್ನಂಜೆ ರಾಜಾ 9ನೆ ಆರೋಪಿಯಾಗಿ ದ್ದ ಹಣ ನೀಡಿ ಕೊಲೆ ಮಾಡಿಸಿದ ಆರೋಪ ಈತನ ಮೇಲೆ ಇತ್ತು, 500 ಪುಟಗಳ ಚಾರ್ಜ್ ಶೀಟನ್ನು ಪೊಲೀಸರು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

2000 ಇಸವಿಯಲ್ಲಿ ರಚಿಸಿದ್ದ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(ಕೋಕಾ)ಯನ್ನು 13 ವರ್ಷಗಳ ಬಳಿಕ ಮೊದಲ ಬಾರಿಗೆ ಈ ಪ್ರಕರಣದಲ್ಲಿ ಕರ್ನಾಟಕದ ಪಶ್ಚಿಮ ವಲಯದ ಪೊಲೀಸರು ಅನ್ವಯಿಸಿ ಪ್ರಕರಣ ದಾಖಲಿಸಿದ್ದರು. ಕೋಕಾ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಲಯಗಳು ಬೆಳಗಾವಿ, ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾತ್ರ ಇದ್ದು, ಬನ್ನಂಜೆ ರಾಜಾನ ಮೇಲೆ ಪೊಲೀಸರು ಆರ್. ಎನ್. ನಾಯಕ್ ಹತ್ಯೆ ಹಿನ್ನೆಲೆಯಲ್ಲಿ ಕೋಕಾ ಪ್ರಕರಣ ದಾಖಲು ಮಾಡಿರುವ ಜಿಲ್ಲೆ ಬೆಳಗಾವಿ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ರಾಜಾನನ್ನು ಬೆಳಗಾವಿ ನ್ಯಾಯಾಲಯಕ್ಕೆ 2015ಆ.14ರಂದು ಹಾಜರುಪಡಿಸಲಾಗಿತ್ತು.

Read These Next

ಕಾರವಾರ: ಪರಿಶಿಷ್ಟ ಜಾತಿ, ಪಂಗಡದವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸಿ; ಡಿ.ಸಿ. ಸೂಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆ ಹಾಗೂ ತಾಲ್ಲೂಕು ಮಟ್ಟದ ಸಭೆಗಳನ್ನು ನಿಗದಿತವಾಗಿ ನಡೆಸಿ, ಸಮಸ್ಯೆಗಳನ್ನು ಶೀಘ್ರ ...

ಬಿಜೆಪಿ ಟಿಕೆಟ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ; ಒಡಿಶಾದಲ್ಲಿ ಹಾಲಶ್ರೀ ಬಂಧನ

ಬಿಜೆಪಿ ಟಿಕೆಟ್ ಹೆಸರಿ ನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣದ ಆರೋಪಿ ಹೊಸ ಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ...

ಚೈತ್ರಾ ವಂಚನೆ ಪ್ರಕರಣ; ಉಡುಪಿಯಲ್ಲಿ ಸಿಸಿಬಿ ಪೊಲೀಸರಿಂದ ತೀವ್ರ ತನಿಖೆ; ಹಿರಿಯಡ್ಕದಲ್ಲಿ 2 ಅಂತಸ್ತಿನ ಮನೆ ನಿರ್ಮಿಸುತ್ತಿರುವುದು ಬೆಳಕಿಗೆ

ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂ. ವಂಚಿಸಿದ ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 185 ಕೋ.ರೂ. ಅವ್ಯವಹಾರ; 17ಕ್ಕೂ ಹೆಚ್ಚು ಮಂದಿಗೆ ವಂಚಿಸಿದ ಚೈತ್ರಾ ಕುಂದಾಪುರ; ಕೆಪಿಸಿಸಿ ಆರೋಪ

ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೊ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ...

ಬಿಜೆಪಿ ಟಿಕೆಟ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ; ಒಡಿಶಾದಲ್ಲಿ ಹಾಲಶ್ರೀ ಬಂಧನ

ಬಿಜೆಪಿ ಟಿಕೆಟ್ ಹೆಸರಿ ನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣದ ಆರೋಪಿ ಹೊಸ ಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ...

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಕಾಮಗಾರಿಗಳ ಪರಿಶೀಲನೆ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಪುರಸಭಾ ವ್ಯಾಪ್ತಿಯ ಇಂದಿರಾ ನಗರ, ಮಾರುತಿ ನಗರ, ಡಾ// ಜಾಕೀರ್ ಹುಸೇನ್ ...

ಸಂವಿಧಾನ ಪೀಠಿಕೆಯ ಜಾಗತಿಕ ವಾಚನ; ಮನುಸೃತಿಯಿಂದ ಗುಲಾಮ ಪದ್ದತಿ ಜಾರಿ; ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನವನ್ನು ನಾಶಪಡಿಸಿ ಮನುಸ್ಮೃತಿ ಜಾರಿಯಾದಲ್ಲಿ ಭಾರತೀಯರು ಗುಲಾಮ ಪದ್ಧತಿಯಲ್ಲಿ ಸಿಲುಕಿಕೊಳ್ಳಲಿದ್ದಾರೆ ಎಂದು ...