ಬೆಳ್ತಂಗಡಿ:ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ – ಇಬ್ಬರ ಬಂಧನ

Source: so news | Published on 21st March 2020, 11:52 PM | State News | Don't Miss |

ಬೆಳ್ತಂಗಡಿ:ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ – ಇಬ್ಬರ ಬಂಧನ
ಮಂಗಳೂರು: ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಓಡಿಕಾರು ಎಂಬಲ್ಲಿ ಅಕ್ರಮ ವಾಗಿ ನಡೆಯುತ್ತಿದ್ದ ಕಪ್ಪು ಕಲ್ಲು ಗಣಿಗಾರಿಕೆ ಮಾಡುತ್ತಿದ್ದಲ್ಲಿಗೆ ಬೆಳ್ತಂಗಡಿ ತಾಲ್ಲೂಕು ತಹಶೀಲ್ದಾರ್ ದಾಳಿ ನಡೆಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕು ಲಾಯಿಲ ನಿವಾಸಿ ಪ್ರತೀಕ್ ಸಾಲ್ಯಾನತ್ ಮತ್ತು ವೇಣೂರು ನಿವಾಸಿ ಅಣ್ಣಪ್ಪ ಎಂದು ಗುರುತಿಸಲಾಗಿದೆ.
ಮಾರ್ಚ್ 19 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಓಡಿಕಾರು ಎಂಬಲ್ಲಿ ಅಕ್ರಮ ವಾಗಿ ನಡೆಯುತ್ತಿದ್ದ ಕಪ್ಪು ಕಲ್ಲು ಗಣಿಗಾರಿಕೆ ಮಾಡುತ್ತಿದ್ದಲ್ಲಿಗೆ ಬೆಳ್ತಂಗಡಿ ತಾಲ್ಲೂಕು ತಹಶಿಲ್ದಾರವರು ದಾಳಿ ನಡೆಸಿದ್ದು, ಸ್ಥಳದಲ್ಲಿ ಜಿಲೆಟಿನ್ ಕಡ್ಡಿಗಳು ವೈರ್ ಜೀವಂತ ಮದ್ದುಗಳು -11, ಚೀಲದಲ್ಲಿ ಜಿಲೆಟಿನ್ ಕಡ್ಡಿಗಳು -15 ಇದ್ದು, ಕೆಲಸಕ್ಕೆ ಬಳಸಿದ ಟ್ರಾಕ್ಟರ್ ಟಿ ನಂಬ್ರ: 33-ಎಎಕ್ಸ್ 7275, ಹಳದಿ ಇಟಾಚಿ ನಂಬ್ರ:310, ಕೆಂಪು ಇಟಾಚಿ ನಂಬ್ರ:22922 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 25 ಲಕ್ಷ ಆಗಿರುತ್ತದೆ.ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...