ಭಟ್ಕಳ: ಭಟ್ಕಳ ಗ್ರಾಮೀಣ ಪೆÇಲೀಸ್ ಠಾಣೆ ವ್ಯಾಪ್ತಿಯ ಬೆಣಂದೂರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂಜ್ ಗ್ರಾಮ ವ್ಯಾಪ್ತಿಯ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಇನ್ನು ಮೂರು ಜನ ಆರೋಪಿತರನ್ನು ಗುರುವಾರ ದಸ್ತಗಿರಿ ಮಾಡಿನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತಿಚೆಗಷ್ಟೆ 8 ಜನ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು ಇಂದು ಮತ್ತೇ ಮೂವರನ್ನು ಬಂಧಿಸಿದ್ದಾರೆ.