ಮುಂಬರುವ ಚುನಾವಣೆಗಳ ಮೇಲೆ ಪಶ್ಚಿಮ ಬಂಗಾಳ ಫಲಿತಾಂಶ ಪರಿಣಾಮ: ಸಿನ್ಹಾ

Source: ಪಿಟಿಐ | Published on 3rd May 2021, 2:59 PM | National News |

ಹಜಾರಿಬಾಗ್‌, ಜಾರ್ಖಂಡ: ಪಶ್ಷಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಹಾಗೂ 2024ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಉಪಾಧ್ಯಕ್ಷ ಯಶವಂತ ಸಿನ್ಹಾ ಭಾನುವಾರ ಹೇಳಿದರು.

‘ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಸಾಧನೆಯ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಸಹ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ದೇಶದ ಜನರು ಕೇಂದ್ರದಲ್ಲಿ ನಾಯಕತ್ವ ಬದಲಾವಣೆ ಬಯಸುತ್ತಿದ್ದಾರೆ’ ಎಂದೂ ಪ್ರತಿಪಾದಿಸಿದರು.

‘ಬಿಜೆಪಿ ನಾಯಕರು ಜಾರ್ಖಂಡ ಹಾಗೂ ಇತರ ರಾಜ್ಯಗಳಿಂದ ಭಾರಿ ಸಂಖ್ಯೆಯ ಜನರನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ, ಪ್ರಚಾರ ಸಭೆಗಳನ್ನು ನಡೆಸಿದರು. ತಮಗೆ ಭಾರಿ ಜನ ಬೆಂಬಲ ಇರುವುದಾಗಿ ಹೇಳಿಕೊಂಡರು. ಆದರೆ, ಮಮತಾ ಬ್ಯಾನರ್ಜಿ ಅವರಿಗೆ ಇರುವ ಜನಬೆಂಬಲ ಫಲಿತಾಂಶದಲ್ಲಿ ವ್ಯಕ್ತವಾಗಿದೆ’ ಎಂದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...