ಕರಾಟೆಯಿಂದಾಗಿ ಆತ್ಮವಿಶ್ವಾಸ ಇಮ್ಮಡಿಗೊಳ್ಳುತ್ತದೆ-ಶಾಸಕ ಸುನಿಲ್ ನಾಯ್ಕ

Source: sonews | By Staff Correspondent | Published on 22nd December 2018, 5:43 PM | Coastal News | Don't Miss |

•    ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‍ಶಿಪ್-2018 ಉದ್ಘಾಟನೆ


ಭಟ್ಕಳ: ಕರಾಟೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರೋತ್ಸಾಹವಿದ್ದು ಇದು ವ್ಯಕ್ತಿಯ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ ಎಂದು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು. 

ಅವರು ಶುಕ್ರವಾರ ಇಲ್ಲಿನ ಆಸರಕೇರಿಯ ಶ್ರೀ ವೆಂಕಟರಮಣ ಸಭಾ ಭವನದಲ್ಲಿ ಶೋಟೋಕಾನ್ ಕರಾಟೆ ಇಸ್ಟಿಟ್ಯೂಟ್‍ನ ಪ್ರಥಮ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‍ಶಿಪ್-2018 ಉದ್ಘಾಟಿಸಿ ಮಾತನಾಡಿದರು. 

ಕರಾಟೆ ಕಲೆಯು ಒಂದು ಜೀವ ರಕ್ಷಕ ಕಲೆಯಾಗಿದ್ದು ಇದಕ್ಕೆ ಆತ್ಮ ವಿಶ್ವಾಸ ಮುಖ್ಯವಾಗಿದೆ. ಆತ್ಮವಿಶ್ವಾಸವನ್ನು ಕರಾಟೆ ಕಲೆ ಇಮ್ಮಡಿಗೊಳಿಸುತ್ತದೆ. ಕರಾಟೆ ಕಲೆಯನ್ನು ಕಲಿತವರು ಅತ್ಯಂತ ಹೆಚ್ಚು ಆತ್ಮ ವಿಶ್ವಾಸದಿಂದ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುವುದು. ಈ ಹಿಂದೆ ಕರಾಟೆ ಶಾಲೆಯನ್ನು ಆರಂಭಿಸಿ ಭಟ್ಕಳದಲ್ಲಿ ಕರಾಟೆಯನ್ನು ಪರಿಚಯಿಸಿದ ವಾಸುದೇವ ನಾಯ್ಕ ಅವರು ತನಗೂ ಹಲವಾರು ಬಾರಿ ಕರಾಟೆಗೆ ಸೇರಿಕೊಳ್ಳುವಂತೆ ಮನವಿ ಮಾಡಿದ್ದರು. 

ಕರಾಟೆ ಕಲೆ ವಿದೇಶದ್ದಾಗಿದ್ದರೂ ಕೂಡಾ ಭಾರತೀಯರಾದ ನಾವು ಅದನ್ನು ನಾವು ನಮ್ಮ ಕಲೆಯನ್ನಾಗಿಸಿಕೊಂಡಿದ್ದೇವೆ. ಇಂದು ನಮ್ಮಲ್ಲಿ ಕರಾಟೆ ಕಲೆಯನ್ನು ಕಲಿತಿದ್ದಾರೆಂದರೆ ಅವರನ್ನು ಜನತೆ ನೋಡುವ ದೃಷ್ಟಿಯೇ ಬದಲಾಗುತ್ತದೆ. ಕಾರಣ ತನ್ನ ಎದುರು ಎಷ್ಟೇ ಜನರು ಬಂದರೂ ಸಹ ಅವರನ್ನು ಎದುರಿಸಬಲ್ಲೆ ಎನ್ನುವ ಧೈರ್ಯ ಓರ್ವ ಕರಾಟೆ ಪಟುಗೆ ಬರುತ್ತದೆ.  ಕರಾಟೆ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ವಾಸು ನಾಯ್ಕ ಅವರು ತಮ್ಮೊಂದಿಗಿಲ್ಲ ಎಂದು ಚಿಂತೆ ಮಾಡಬೇಡಿರಿ.  ನಿಮ್ಮೊಂದಿಗೆ ನಾವೆಲ್ಲಾ ಇದ್ದೇವೆ ಎಂದೂ ಅವರು ಹೇಳಿದರು. ಕರಾಟೆ ಶಾಲೆಗೆ ಸ್ವಂತ ಕಟ್ಟಡವನ್ನು ಕಟ್ಟುವುದಾದರೆ, ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಧನ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಟೋಕಾನ್ ಕರಾಟೆ ಇನ್ಸ್‍ಸ್ಟಿಟ್ಯೂಟ್‍ನ ಅಧ್ಯಕ್ಷ ಸುರೇಶ ನಾಯ್ಕ ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಮಾತನಾಡಿ ಕರಾಟೆ ಪಟುಗಳು ಹೆಚ್ಚು ಆಸಕ್ತಿ ವಹಿಸಿ ತಮ್ಮ ಆತ್ಮ ರಕ್ಷಣೆಗಾಗಿ ಕರಾಟೆಯನ್ನು ಕಲಿಯುತ್ತಾರೆ.  ಹೆಣ್ಣು ಮಕ್ಕಳು ಹಲವಾರು ಬಾರಿ ಹೊರಗೆ ಹೋಗ ಬೇಕಾದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಎದುರಿಸಬೇಕಾದ ಆಪತ್ ಎದುರಿಸಲು ಅವರಿಗೆ ಆತ್ಮವಿಶ್ವಾಸ ವೃದ್ಧಿಯಾಗುವುದು. ಹೆಚ್ಚು ಹೆಚಚು ಹೆಣ್ಣೂ ಮಕ್ಕಳು ಕರಾಟೆಯನ್ನು ಕಲಿಯಲಿ ಎಂದು ಹಾರೈಸಿದರು. 

ಇನ್ನೋರ್ವ ಮುಖ್ಯ ಅತಿಥಿಗಳಾದ ಮುಖ್ಯ ರೆಫ್ರಿ ಹನ್ಷಿ ಕೆ.ವಿ. ರವಿ, ಡಿ.ವೈ.ಎಸ್.ಪಿ. ವೆಲೆಂಟೈನ್ ಡಿಸೋಜ, ವಿಶೇಷ ಆಹ್ವಾನಿತರಾದ ವಿಜಯವಾಣಿ ಸಂಪಾದಕರ ವಿವೇಕ ಮಹಾಲೆ, ಅತಿಥಿಗಳಾದ ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಅಟೋ ರಕ್ಷಾ ಯೂನಿಯನ್ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಗೌರವಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿದರು. 

ವೇದಿಕೆಯಲ್ಲಿ ಮುಖ್ಯ ತರಬೇತುದಾರ ಸಿ. ರಾಜನ್, ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲ ಜ್ಯೋತಿಷ್ ಎಂ., ಸಂಸ್ಥೆಯ ಗೌರವಾಧ್ಯಕ್ಷ ಕಿರಣ್ ಶ್ಯಾನಭಾಗ, ಮುಸ್ಲಿಂ ಯುತ್ ಫೆಡರೇಶನ್ ಅಧ್ಯಕ್ಷ ಇಮ್ತಿಯಾಜ್ ಉದ್ಯಾವರ್ ಮುಂತಾದವರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್-2018ರಲ್ಲಿ ರಾಷ್ಟ್ರದ 7 ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ಮಂಜುನಾಥ ನಾಯ್ಕ ಪ್ರಾರ್ಥಿಸಿದರು. ಶಿಕ್ಷಕ ನಾರಾಯಣ ನಾಯ್ಕ ನಿರೂಪಿಸಿ, ವಂದಿಸಿದರು.  


 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...