ಭಟ್ಕಳ: ಮುರುಡೇಶ್ವರದಿಂದ ಭಟ್ಕಳದ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಆರೋಪದ ಮೇರೆಗೆ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ತಾಲೂಕಿನ ಶಿರಾಲಿ ಚೆಕ್ಪೋಸ್ಟ ಬಳಿ ನಡೆದಿದೆ.
ಆರೋಪಿಗಳನ್ನು ತಾಲೂಕಿನ ಸನಾದ್ ಅಬ್ದುಲ್ ಬಷಿರ್ ಹಾಗೂ ಸಲೀಮ್ ಮಹ್ಮದ್ ಉಮ್ಮರ್ ಗೌಸ ಎಂದು ಗುರುತಿಸಲಾಗಿದೆ. ವಾಹನದಲ್ಲಿ ಎಮ್ಮೆ ಹಾಗೂ ಕರುವನ್ನು ಸಾಗಿಸಲಾಗಿತ್ತು ಎಂದು ತಿಳಿದು ಬಂದಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸೈ ಮಂಜಪ್ಪ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.