ಭಟ್ಕಳ ಪೇಟೆ, ಪ್ರಮುಖ ಕಚೇರಿಗಳಿಗೆ ಕ್ರಿಮಿನಾಶಕ ಸಿಂಪಡಣೆ

Source: S O news service | By I.G. Bhatkali | Published on 6th May 2021, 10:52 AM | Coastal News |

 ಭಟ್ಕಳ: ತಾಲೂಕಿನ ಅಗ್ನಿಶಾಮಕ ದಳದ ವಾಹನಗಳನ್ನು ಬಳಸಿ ಪೇಟೆ, ಮಿನಿವಿಧಾನಸೌಧ, ಸರಕಾರಿ ಆಸ್ಪತ್ರೆ, ಪುರಸಭಾ ಕಚೇರಿ ಸೇರಿದಂತೆ ಜನರು ಸೇರುವ ಪ್ರಮುಖ ಸ್ಥಳಗಳಿಗೆ ಕ್ರಿಮಿನಾಶಕ ಸಿಂಪಡಿಸಲಾಯಿತು.

ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುರಸಭಾ ಅಧಿಕಾರಿಗಳು ಈ ಕ್ರಮವನ್ನು ಜರುಗಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ದೇವರಾಜು, ಹಿರಿಯ ಆರೋಗ್ಯಾಧಿಕಾರಿ ಸೋಜಿಯಾ ಸೋಮನ್, ಅಗ್ನಿಶಾಮಕ ದಳದ ಠಾಣಾಧಿಕಾರಿ ರಮೇಶ ಮತ್ತಿತರರು ಉಪಸ್ಥಿತರಿದ್ದರು. 
 

Read These Next