ಭಟ್ಕಳ: ತಾಲೂಕಿನ ಅಗ್ನಿಶಾಮಕ ದಳದ ವಾಹನಗಳನ್ನು ಬಳಸಿ ಪೇಟೆ, ಮಿನಿವಿಧಾನಸೌಧ, ಸರಕಾರಿ ಆಸ್ಪತ್ರೆ, ಪುರಸಭಾ ಕಚೇರಿ ಸೇರಿದಂತೆ ಜನರು ಸೇರುವ ಪ್ರಮುಖ ಸ್ಥಳಗಳಿಗೆ ಕ್ರಿಮಿನಾಶಕ ಸಿಂಪಡಿಸಲಾಯಿತು.
ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುರಸಭಾ ಅಧಿಕಾರಿಗಳು ಈ ಕ್ರಮವನ್ನು ಜರುಗಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ದೇವರಾಜು, ಹಿರಿಯ ಆರೋಗ್ಯಾಧಿಕಾರಿ ಸೋಜಿಯಾ ಸೋಮನ್, ಅಗ್ನಿಶಾಮಕ ದಳದ ಠಾಣಾಧಿಕಾರಿ ರಮೇಶ ಮತ್ತಿತರರು ಉಪಸ್ಥಿತರಿದ್ದರು.