ಭಟ್ಕಳ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ನಿಲ್ದಾಣದಿಂದ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಆಗುವ ತೊಂದರೆ ಹಾಗೂ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ನಾಗರಿಕ ವೇದಿಕೆ ಘಟಕದ ಗೌರವಾಧ್ಯಕ್ಷ, ನ್ಯಾಯವಾದಿ ದತ್ತಾತ್ರೇಯ ನಾಯ್ಕ ತಿಳಿಸಿದರು.
ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡುತ್ತಿದ್ದರು.
'ಕೆ.ಎಸ್.ಆರ್.ಟಿ.ಸಿ. ನಿಲ್ದಾಣವೂ ಕುಸಿದು ಬಿದ್ದು ಹಲವಾರು ತಿಂಗಳಾಗಿದ್ದು ಇಲ್ಲಿಯವರಿಗೆ ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಟ್ಟಿಲ್ಲವಾಗಿದೆ. ಇದರಿಂದ ಪ್ರಯಾಣಿಕರು ಸಾರ್ವಜನಿಕರು ಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಈ ಬಗ್ಗೆ ಮುತುವರ್ಜಿ ವಹಿಸುತ್ತಿಲ್ಲ. ಈ ಶೀಘ್ರದಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್ ಹಾಗೂ ಮಹಿಳೆಯರು, ಮಕ್ಕಳು ಹಿರಿಯರು ನಾಗರಿಕರಿಗೆ ತಾತ್ಕಾಲಿಕ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಮತ್ತು ಕ್ಯಾಬಿನ್ ರೀತಿಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಮುಂದಿನ 15 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ನಾಗರಿಕೆ ವೇದಿಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸಾರ್ವಜನಿಕರೊಂದಿಗೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಣ ಪಡೆದು ವೋಟ್ ಹಾಕುವ ಚುನಾವಣಾ ನೀತಿಯಿಂದ ಸಮಾಜದಲ್ಲಿ ಇಂತಹ ಅನ್ಯಾಯ ನಡೆಯುತ್ತಿದೆ. ಸಾರ್ವಜನಿಕರು ಮತ್ತು ಹಕ್ಕು ಪಡೆಯಲು ಹೋರಾಟ ಮನೋಭಾವನೆ ಮರೆತಿರುವುದೇ ಇಂತಹ ಅನ್ಯಾಯಕ್ಕೆ ದಾರಿ ಮಾಡಿಕೊಟ್ಟಿದೆ. ಭ್ರಷ್ಟ ಚುನಾವಣಾ ನೀತಿಯಿಂದ ಭ್ರಷ್ಟ ಶಾಸಕರು, ಸಂಸದರು, ಮಂತ್ರಿಗಳು ಆರಿಸಿ ಬರುವುದು ಈ ಎಲ್ಲ ಭ್ರಷ್ಟ ವ್ಯವಸ್ಥೆಗೆ ಕಾರಣವಾಗಿದ್ದು ಈ ವ್ಯವಸ್ಥೆಯನ್ನು ನಾಗರಿಕೆ ವೇದಿಕೆ ಖಂಡಿಸುತ್ತದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ನಾಗರಿಕ ವೇದಿಕೆ ತಾಲೂಕಾ ಘಟಕ ಅಧ್ಯಕ್ಷ ಪಾಸ್ಕಲ್ ಗೋಮ್ಸ ಸೇರಿದಂತೆ ಘಟಕದ ಸದಸ್ಯರು ಇದ್ದರು.
Read These Next
ಭಟ್ಕಳ ಕಡವಿನಕಟ್ಟ ಹೊಳೆಯಲ್ಲಿ ಮುಳುಗಿ ಓರ್ವ ಬಾಲಕ ಹಾಗು ಮಹಿಳೆ ಸಾವು
ಏಪ್ರಿಲ್ 21ರಂದು ಸೂಡಿಗದ್ದೆಬಳಿಯ ಹಡಿನ ಮುಳ್ಳಿ ಹಿತ್ಲು ಸಮುದ್ರದಲ್ಲಿ ಇಬ್ಬರು, ಮೇ 5 ರಂದು ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ...
ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ
ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...
ಕಾರವಾರ: ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಉತ್ತರಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮುಂಡಗೋಡ ತಾಲ್ಲೂಕಿನ ...
ಕಾರವಾರ: ಜಿಲ್ಲೆಯಲ್ಲಿ 36.06 ಕೋಟಿ ರೂ ಬರ ಪರಿಹಾರ ಬಿಡುಗಡೆ
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾದ ಬರಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಜಿಲ್ಲೆಯ ರೈತರಿಗೆ ಇದುವರೆಗೆ ಒಟ್ಟು 36.06 ...
ಭಟ್ಕಳದ ಉದ್ಯಮಿಗೆ ಅಪರಿಚಿತ ಯುವತಿಯಿಂದ ಕರೆ; ವಂಚನೆಗೆ ವಿಫಲ ಯತ್ನ
ಭಟ್ಕಳ: ಇಂಟರ್ನೆಟ್ ಮತ್ತು ಫೋನ್ ಕರೆಗಳ ಮೂಲಕ ವಂಚಿಸಿ ದೊಡ್ಡ ಮೊತ್ತದ ಹಣವನ್ನು ದೋಚುವ ಪ್ರಕರಣಗಳು ಸಾಮಾನ್ಯವಾಗಿದ್ದು, ಇದನ್ನು ...
ಬೆಳೆ ಹಾನಿ ಪರಿಹಾರ ದೊರೆಯದ ರೈತರು ತಕ್ಷಣ ಸಂಪರ್ಕಿಸಿ ; ಜಿಲ್ಲಾಧಿಕಾರಿ
ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಭಟ್ಕಳ 08385-226422, ಶಿರಸಿ 08384-226383, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ ...
ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಭಟ್ಕಳ: ಲಕ್ಷಾಂತರ ರೂಪಾಯಿ ಚಿನ್ನಾಭರಣ, ನಗದು, ದೋಚಿ ಪರಾರಿಯಾದ ಕಳ್ಳರು
ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ, ಸಾವಿರಾರು ...
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆ ಗಣನೀಯ ಸಾಧನೆ; ಜಿಲ್ಲಾಧಿಕಾರಿ ಅಭಿನಂದನೆ
ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5 ನೇ ಸ್ಥಾನ (ಕಳೆದ ಬಾರಿ 12 ನೇ ಸ್ಥಾನ) ...
ಐಸಿಎಸ್ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ
ಶಾಲೆಯ ವಿದ್ಯಾರ್ಥಿಗಳಾದ ಅನುಷ್ಕಾ ನಾಗರಾಜ ದೇಶಭಂಡಾರಿ 94.80%, ಪೂರ್ಣಿಮಾ ಭೋಸಲೆ 94.60%, ಶಮಂತ್ ಕುಮಾರ ನಾಯ್ಕ 91.60%, ಅವನಿ ಶ್ರೀನಿವಾಸ ಪಡಿಯಾರ ...
ಐ.ಸಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಪ್ರಕಟ; ನ್ಯೂ ಶಮ್ಸ್ ಸ್ಕೂಲ್ ಶೇ.೧೦೦ ಫಲಿತಾಂಶ
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ...