ಅರಬ್ ಜಗತ್ತಿನ ಪ್ರಸಿದ್ದ ಟಾಪ್೫೦ ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ ೪೨ನೇ  ಸ್ಥಾನ

Source: sonews | By Staff Correspondent | Published on 18th May 2017, 11:57 PM | Coastal News | State News | National News | Gulf News | Global News | Special Report | Don't Miss |

ಭಟ್ಕಳ: ಭಟ್ಕಳದ ಸುಪುತ್ರನೊಬ್ಬ ಅರಬ್ ಜಗತ್ತಿನ ಪ್ರಸಿದ್ದ ಟಾಪ್ ೫೦ ಭಾರತೀಯ ಎಕ್ಸಿಕ್ಯೂಟ್ ಗಳ ಸಾಲಿನ ೪೨ನೇ ಸ್ಥಾನದಲ್ಲಿ ಹೆಸರನ್ನು ಗಿಟ್ಟಿಸಿಕೊಂಡಿದ್ದು ಭಟ್ಕಳ ಹಾಗೂ ಭಾರತೀಯರ ಪಾಲಿಗೆ ಸಂತಸದ ವಿಷಯವಾಗಿದೆ.

ಭಟ್ಕಳದ ಖ್ಯಾತ ಮೌಲಾನ ಕುಟುಂಬದ  ಎಸ್.ಎಂ.ಸೈಯ್ಯದ್ ಮುಸ್ತಾಖ್ ಮಸೂದ್ ಮಧ್ಯಪ್ರಾಚ್ಯದ ಫೋರ‍್ಬಸ್ ಸಂಸ್ಥೆ ಪ್ರಕಟಿಸಿದ ಖ್ಯಾತನಾಮ ಟಾಪ್ ೫೦ ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿ ಸ್ಥಾನವನ್ನು ಪಡೆದುಕೊಂಡಿದ್ದು ಭಟ್ಕಳಿಗರ ಹೆಸರನ್ನು ಜಾಗತಿಕ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದೆ.

ಭಟ್ಕಳದ ಮೌಲಾನ ಲುಂಬಿ ಜಗತ್ತಿನಲ್ಲೆ ಹೆಸರು ಮಾಡಿದೆ. ಈಗ ಅದೇ ಕುಟುಂಬದ ಸದಸ್ಯನೊಬ್ಬ ತನ್ನ ಅಗಾಧ ಪ್ರತಿಭೆಯಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದು ಇಲ್ಲಿನ ಪ್ರತಿಭೆಗಳಿಗೆ ಹಿಡಿದ ಕೈಗನ್ನಡಿಯಾಗಿದೆ. ಮೌಲಾನ ಲುಂಗೀಸ್ ನ ನಿರ್ದೇಶಕ ಹಾಗೂ ಮೀಟಾಲೆಕ್ಸ್  ಎಜೆನ್ಸೀಸ್ ಎರ್ನಾಕುಲಂ ನ ಭಾಗಿಧಾರ ಎಸ್.ಎಂ.ಸೈಯ್ಯದ್ ಮಸೂದ್ ರ ಪುತ್ರರಾಗಿರುವ ಮುಷ್ತಾಖ್ ಮಸೂದ್ ದುಬೈ ಇನ್ವೆಸ್ಟ್ಮೆಂಟ್ ಗ್ರೂಪ್ ಪಿ.ಜೆ.ಎಸ್.ಸಿ ಯ ಸಿಎಫ್ಓ ಹುದ್ದೆಯನ್ನು ಅಲಂಕರಿಸಿದ್ದು ಚಾರ‍್ಟೆಡ್ ಅಕೌಂಟೆಂಟ್ ಆಗಿದ್ದಾರೆ. ಫೊರ‍್ಬಸ್ ಮಿಡ್ಲ ಈಸ್ಟ್ ಸಂಸ್ಥೆಯು ಮುಷ್ತಾಖ್ ರನ್ನು ಇವರ ಉತ್ತಮ ಕಾರ್ಯವೈಖರಿಯನ್ನು ಕಂಡು ತನ್ನ ಟಾಪ್ ೫೦ ಮಂದಿಯಲ್ಲಿ ಸ್ಥಾನವನ್ನು ನೀಡಿದೆ. ದುಬೈ ಇನ್ವೆಸ್ಟ್ಮೆಂಟ್ ಪಿಜೆಎಸ್ಸಿ  ಕಂಪಿನಿಯ ಗ್ರೂಪ್ ಸಿ.ಎಫ್.ಓ ಆಗಿರುವ ಇವರು ಹಣಕಾಸು ಮಾರುಕಟ್ಟೆಯಲ್ಲಿ ಉತ್ತಮ ಹೆಸರನ್ನು ಮಾಡಿದ್ದಾರೆ. ಫೈನಾನ್ಶಿಯಲ್ ಇಂಡಸ್ಟ್ರಿಯಲ್ ಮತ್ತು ರಿಯಲ್ ಎಸ್ಟೇಟ್ ನಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಈ ಕಂಪನಿಯ ಸಂಪೂರ್ಣ ಹಣಕಾಸು ವ್ಯವಹಾರವನ್ನು ನೋಡಿಕೊಳ್ಳುತ್ತಿರುವ ಇವರು ತಮ್ಮ ಪ್ರತಿಭೆಯಿಂದಾಗಿ ಕಂಪನಿಯನ್ನು ಉತ್ತುಂಗಕ್ಕೇರುವಂತೆ ಮಾಡಿದ್ದಲ್ಲದೆ ಇದರ ಉಪಸಂಸ್ಥೆಗಳಾದ ಅಲ್ ಮಾಲ್ ಕ್ಯಾಪಿಟಲ್ ಪಿಎಸ್ಸಿ ಇದರ ಬೋರ್ಡ್ ಆಫ್ ಡೈರಕ್ಟರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸೈಯ್ಯದ್ ಮುಷ್ತಾಖ್ ಕೇರಳದ  ಎರ್ನಾಕುಲಂ ನ  ಸೆಂಟ್ ಅಲ್ಬರ್ಟ್ ಕಾಲೇಜಿನಿಂದ ವಾಣಿಜ್ಯ ಪದವಿಯನ್ನು ಪಡೆದು ಸ್ಥಾನೀಯ ಆಡಿಟ್ ಫೊರಂ ನೊಂದಿಗೆ ಸೇರಿ ೧೯೮೯ರಲ್ಲಿ ಸಿ.ಎ ಪದವಿಯನ್ನು ಪೂರ್ಣಗೊಳಿಸಿದರು. ನಂತರ ದುಬೈಗೆ ಉದ್ಯೋಗ ಅರಸಿ ಬಂದ ಅವರನ್ನು ಅಲ್ಲಿ ಕೈಯಾಡಿದ್ದಲ್ಲೆ ಚಿನ್ನವನ್ನೇ ಹೆಕ್ಕತೊಡಗಿದರು.  ಅಲ್ಲಿ ಆರ್ಥರ್ ಯಂಗ್ ಮತ್ತು ಆರ್ಥರ್ ಅಂಡ್ರಸೆನ್ ಕಂಪನಿಯಲ್ಲಿ ಆಡಿಟರ್ ಆಗಿ ನೇಮಕಗೊಂಡರು.೧೯೯೨ರಲ್ಲಿ ಅಬುದಾಬಿ ಗೆ ಸ್ಥಳಾಂತರಗೊಂಡು ಅಲ್ಲಿನ ಪ್ರಸಿದ್ಧ ಪೆಟ್ರೋಲಿಯಂ ಕಂಪನಿ ಅಡ್ನೋಕ್ ಡಿಸ್ಟ್ರಿಬ್ಯೂಶನ್ ನಲ್ಲಿ ಆಂತರಿಕ ಆಡಿಟರ್ ಹುದ್ದೆಯನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿದರು. ೧೯೯೯ ರಲ್ಲಿ ಸೈಯ್ಯದ್ ಮುಷ್ತಾಖ್ ಕುಪೋಲಾ ಗ್ರೂಪ್ ಸೇರಿ ಅಡಿಟಿಂಗ್ ನಿಂದ ಫೈನಾನ್ಸ್ ವಿಭಾಗದಲ್ಲಿ ತಮ್ಮ ಪ್ರಯಾಣವನ್ನು ಬೆಳೆಸಿದರು. ನಂತರ ಮಿಡ್ಲ್ ಈಸ್ಟ್ ಮತ್ತು ನಾರ್ತ ಆಫ್ರೀಕಾ (ಮೀನಾ ) ದಲ್ಲಿ ಅಬರಾಝ್ ಕ್ಯಾಪಿಟಲ್ ನೊಂದಿಗೆ ಗುರುತಿಸಕೊಂಡರು. ಇಲ್ಲಿನ ಅವರ ಪ್ರತಿಭೆಗೆ ಮತ್ತಷ್ಟು ಹೊರಬರಲು ಸಾಧ್ಯವಾಗಿದ್ದು ತಮ್ಮ ಕೆಲಸದಲ್ಲಿನ ಶ್ರದ್ಧೇ ಮತ್ತು ಪ್ರಾಮಾಣಿಕತೆಯಿಂದಾಗಿ ಅವರು ದುಬೈ ಇನ್ವೆಸ್ಟ್ಮೆಂಟ್ಸ್ ಗಾಗಿ ಕೆಲಸ ಮಾಡುವ ಸುಸಂದರ್ಭವನ್ನು ಗಳಿಸಿಕೊಂಡರು.

ಇಂದು  ಪ್ರತಿಯೊಬ್ಬರು ಇಂತಹ ಅಗಾಧ ಪ್ರತಿಭಾವಂತನನ್ನು ಪಡೆದ ಭಟ್ಕಳ ಹಾಗೂ ಭಟ್ಕಳದ ಜನತೆ ಸೌಭಾಗ್ಯವಂತರು ಎಂದು ಹೇಳುವಂತಾಗಿದೆ.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...