ಭಟ್ಕಳ: ಕೋಸ್ಟಲ್ ಕಿಂಗ್ ವೆಲ್ಫೇರ್ ಅಸೋಸಿಯೇಶನ್ ನಿಂದ ಬೃಹತ್ ರಕ್ತದಾನ ಶಿಬಿರ

Source: sonews | By Staff Correspondent | Published on 31st October 2018, 5:44 PM | Coastal News |

ಭಟ್ಕಳ: ಇಲ್ಲಿನ ಕೋಸ್ಟಲ್ ಕಿಂಗ್ ವೆಲ್ಫೇರ್ ಅಸೋಸಿಯೇಶನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಸಂಯುಕ್ತಾಶ್ರಯದಲ್ಲಿ ರೆಡ್ ಕ್ರಾಸ್ ಸೂಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ನಗರದ ಮದೀನಾ ಕ್ರಿಕೆಟ್ ಮೈದಾನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯದ ಪಶುಸಂಗೋಪನ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ, ಕೋಸ್ಟಲ್ ಕಿಂಗ್ ಅಸೋಸಿಯೇಶನ್ ಸಮಾಜಿಕ ಕಾರ್ಯಗಳನ್ನು ಶ್ಲಾಘಿಸಿ ಪ್ರತಿಯೊಬ್ಬರು ಸಾಮಾಜಿಕ ಕಳಕಳಿ ಹೊಂದುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಅಸೋಸಿಯೇಶನ್ ವತಿಯಿಂದ ಸಚಿವರಿಗೆ ಶಾಲು ಹಾಕಿ ಸನ್ಮಾನಿಸಲಾಯಿತು. 

ಶಿಬಿರದಲ್ಲಿ 150ಕ್ಕೂ ಹೆಚ್ಚು ಮಂದಿ ತಮ್ಮ ರಕ್ತವನ್ನು ದಾನ ಮಾಡಿದರು. ಈ ಸಂದರ್ಭದಲ್ಲಿ  ಕುಂದಾಪು ರೆಡ್ ಕ್ರಾಸ್ ಸೂಸೈಟಿಯ ಅಧ್ಯಕ್ಷ ಜಯಕುಮಾರ್ ಶೇಟ್ಟಿ, ಖಜಾಂಚಿ ಶಿವರಾಮ್ ಶೆಟ್ಟಿ, ಗಣೇಶ್ ಆಚಾರಿ, ವೀರೇಂದ್ರ ಕುಮಾರ್, ಫಯಾಜ್ ಅಲಿ ಬೈಂದೂರು, ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಆದಂ ಪಣಂಬೂರು, ಕೋಸ್ಟಲ್ ಕಿಂಗ್ ಅಸೋಸಿಯೇಶನ್  ಅಧ್ಯಕ್ಷ ಇಖ್ಬಾಲ್ ಪಠಾನ್, ವಸಿಯುಲ್ಲಾ ಸಿದ್ದಿಬಾಪ, ಅಬ್ದುಲ್ ಗಫೂರು, ಮೌಲಾನ ಅಶ್ಫಾಖ್ ಪೋತೆ ಮತ್ತಿತರರು ಉಪಸ್ಥಿತರಿದ್ದರು. 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...