ಅಕ್ರಮವಾಗಿ ಸಾಗಿಸುತ್ತಿದ್ದ 60 ಸಾವಿರ ರೂ ಮೌಲ್ಯದ ಸಾಗುವಾನಿ ಮರದ ತುಂಡು ವಶ

Source: sonews | By Staff Correspondent | Published on 17th September 2020, 6:25 PM | Coastal News | Don't Miss |

ಭಟ್ಕಳ: ಸುಮಾರು 60ಸಾವಿರ ರೂ ಮೌಲ್ಯದ  ಸಾಗುವಾನಿ ಮರದ ತುಂಡುಗಳನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳು ದಾಳಿ ನಡೆಸಿದ್ದು ಸಾಗುವಾನಿ ಕಳ್ಳರು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಅರಣ್ಯ ಇಲಾಖೆಯ ಹೊನ್ನಾವರ ವಿಭಾಗದ ಭಟ್ಕಳ ವಲಯದ ಅರಣ್ಯ ಸಿಬ್ಬಂಧಿಗಳು ಬುಧವಾರ ರಾತ್ರಿ  1-00ಗಂಟೆಗೆ ಗಸ್ತಿನಲ್ಲಿರುವಾಗ ಶಿರಾಲಿ ಶಾಖೆಯ  ಉತ್ತರಕೊಪ್ಪ ರಸ್ತೆಯ ಹತ್ತಿರ ಕಮಟಿಕೇರಿ, ಕಾಯ್ಕಿಣಿಯಲ್ಲಿ ಅಕ್ರಮವಾಗಿ ಸಾಗುವಾನಿ ಮರದಿಂದ ತಯಾರಿಸಿದ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದರು ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂಧಿಗಳನ್ನು ನೋಡಿದ ಕಳ್ಳರು ಮರದ ತುಂಡುಗಳು ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಹಿರಿಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಹೊನ್ನಾವರ ಉಪಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ನಾಯ್ಕ, ಭಟ್ಕಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್, ವಲಯ ಸಂರಕ್ಷಣಾಧಿಕಾರಿ ಸವಿತಾ ಆರ್. ದೇವಾಡಿಗ, ಉಪವಲಯ ಅರಣ್ಯಾಧಿಕಾರಿ ಜಗದೀಶ ನಾಯ್ಕ ಶ್ರೀಕಾಂತ್ ಪವಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...