ಗ್ಯಾಸ್‌ ಟ್ಯಾಂಕರ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆ

Source: so news | Published on 27th September 2019, 6:14 AM | Coastal News | Don't Miss |


ಭಟ್ಕಳ: ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್  ಮುಂಬಾಗದ ರಸ್ತೆಯಲ್ಲಿ ನಿಂತಿರುವ ಗ್ಯಾಸ್ ಟ್ಯಾಂಕರ್ ನಲ್ಲಿ ಚಾಲಕನೊರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿ ವಾಸು ಕರಿಯಪ್ಪ ನಾಯ್ಕ(30) ತಾಲೂಕಿನ
ತೆಂಗಿನಗುಂಡಿ ನಿವಾಸಿಯಾಗಿದ್ದು. ಈತ ನಿನ್ನೆ ಮನೆಗೆ ಬಂದವನು ಮತ್ತೆ ಕೆಲಸಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ಹೇಳಿ ಹೋಗಿದ್ದ. ಬೆಳಿಗ್ಗೆಯಿಂದ ಸಂಜೆಯ ತನಕ ಗ್ಯಾಸ್ ಟ್ಯಾಂಕರ್ ರಸ್ತೆಯಲ್ಲೆ ಇದ್ದು ಚಾಲಕನ ಶೀಟ್ ಗ್ಲಾಸಿಗೆ ಬಟ್ಟೆ ಹಾಕಿರುದನ್ನು  ಇರುವುದನ್ನು ಗಮನಿಸಿದ ಸಾರ್ವಜನಿಕನೊರ್ವ ಗ್ಯಾಸ್ ಟ್ಯಾಂಕರ್ ಹತ್ತಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದ್ದು. ಕೂಡಲೇ ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಮೃತ ವ್ಯಕ್ತಿಯ ಪಕ್ಕದಲ್ಲಿ ವಿಷದ ಬಾಟಲ್ ಪತ್ತೆಯಾಗಿದ್ದು ಬಾಟಲ್ ಅನ್ನು ವಶಕ್ಕೆ ಪಡೆದ ಪೊಲೀಸರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸರ್ಕಾರಿ ಆಸ್ಪತ್ರೆಗೆ ಮೃತನ ಸ್ನೇಹಿತರು ಹಾಗೂ ಸಂಬಂಧಿಕರು ಬಂದು ನೋಡಿದ್ದಾರೆ.
ಮೃತ ವ್ಯಕ್ತಿ ಪತ್ನಿ ಹಾಗೂ ಇಬ್ಬರು  ಮಕ್ಕಳನ್ನು ಅಗಲಿದ್ದು .ಇತನ ಆತ್ಮಹತ್ಯೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾಗಿದೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...