ಭಟ್ಕಳ ತಾಲೂಕಿನಲ್ಲಿ ಮುಂದುವರೆದ ಮಳೆ;  ಧರೆಗುರುಳಿದ ಮರ ಹಾಗೂ ವಿದ್ಯುತ್ ಕಂಬಗಳು

Source: sonews | By Staff Correspondent | Published on 29th June 2018, 8:25 PM | Coastal News | Don't Miss |

ಭಟ್ಕಳ: ತಾಲೂಕಿನಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು ಕಳೆದ ಐದಾರು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ.

 

ತಾಲೂಕಿನಲ್ಲಿ ಹರಿಯುತ್ತಿರುವ ನದಿ, ಹೊಳೆ ಹಳ್ಳಗಳು ತುಂಬಿಕೊಂಡಿದ್ದು ತನ್ನ ಪೌರುಷವನ್ನು ಮೆರೆಯುತ್ತಿವೆ. ಬುಧವಾರ ರಾತ್ರಿ ಬಿದ್ದ ಮಳೆಯಿಂದಾಗಿ ಅಲ್ಲಲ್ಲಿ ಬೃಹತ್ ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದ್ದು ಹೆದ್ದಾರಿಗೆ ತಾಗಿಕೊಂಡ ಶಿಫಾ ಕ್ರಾಸ್ ಬಳಿ ಮರವೊಂದು ಬೇರು ಸಹಿತ ಉರುಳಿ ಬಿದ್ದಿದ್ದು ಇದರ ಪರಿಣಾವಾಗಿ ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ. ಮರವು  ನಯೀಮ್ ಎಂಬುವವರ ಮನೆ ಮೇಲೆ ಬಿದ್ದಿದು ಮನೆಗೆ ತುಂಬಾ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಯಾವುದೇ ಜೀವ ಹಾನಿ ಸಂಭವಿಸಲಿಲ್ಲ. ಗ್ರಾಮೀಣ ಭಾಗದ ಮುಂಡಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಸುಭ್ರಾಯ ದೇವಾಡಿಗ ಎಂಬುವವ ಮನೆ ಗೋಡೆ ಕುಸಿದು ಬಿದ್ದಿದ್ದು ಅಧಿಕಾರಿಗಳು ಪಂಚನಾಮೆಯನ್ನು ನಡೆಸಿದ್ದಾರೆ.                                          ಭಾರೀ ಮಳೆಯಿಂದಾಗಿರಾಷ್ಟ್ರೀಯ ಹೆದ್ದಾರಿಯ ಮೇಲೆ ಸುಮಾರು ಎರಡುಅಡಿಗಷ್ಟು ನೀರು ನಿಂತು ಹೆದ್ದಾರಿಯಲ್ಲಿ ಓಡಾಡುವವಾಹನ ಸವಾರರು ತೀವ್ರ ತೊಂದರೆ ಪಟ್ಟಿದ್ದರೆ,ದ್ವಿಚಕ್ರ ವಾಹನ ಸವಾರರು ಕೂಡಾ ಪ್ರಯಾಸದಿಂದ ವಾಹನ ಚಲಾಯಿಸಬೇಕಾಗಿಬಂದಿತ್ತು.

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...