ಭಟ್ಕಳ: ಸುರಿಯುತ್ತಿರುವ ಮಳೆ ಗಾಳಿಗೆ ಮನೆಯೊಂದು ಕುಸಿದು ಬಿದ್ದ ಘಟನೆ ತಾಲೂಕಿನ ಮಾವಳ್ಳಿ-2ರ ಚಂದ್ರಹಿತ್ತಲಿನಲ್ಲಿ ನಡೆದಿದೆ.
ಮನೆಯು ಶಂಕರ ಭಟ್ಟರ ಹಿತ್ತಲ್ ಎಂಬುವವರಿಗೆ ಸೇರಿದ್ದಾಗಿದ್ದು, ಭಾಗಶಃ ಮನೆ ನೆಲಕ್ಕೊರಗಿರುವುದು ಕಂಡು ಬಂದಿದೆ. ಮನೆಯಲ್ಲಿ ಯಾರೂ ವಾಸವಾಗಿರದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆಯಿಂದಾಗಿ ಮುರುಡೇಶ್ವರ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.