ಭಟ್ಕಳ;ಗ್ರಾಮದ ರಸ್ತೆಯ ಬದಿಯ ಹಾಗೂ ದೇವಸ್ಥಾನದ ಆವರಣವನ್ನು  ಸ್ವಚ್ಚಗೊಳಿಸುವುದರ ಮೂಲಕ ಸ್ವತಂತ್ರ ದಿನಾಚರಣೆ

Source: varthabhavan | By Arshad Koppa | Published on 16th August 2017, 8:29 AM | Coastal News | Special Report | Guest Editorial |

ಭಟ್ಕಳ:  ನಗರದ  ಆಸರಕೇರಿಯ ವೆಂಕಟೇಶ್ವರ ಯುವಕ ಮಂಡಳದ ಸದಸ್ಯರು  ತಮ್ಮ  ಗ್ರಾಮದ ರಸ್ತೆಯ ಬದಿಯ ಹಾಗೂ ದೇವಸ್ಥಾನದ ಆವರಣವನ್ನು  ಸ್ವಚ್ಚಗೊಳಿಸುವುದರ ಮೂಲಕ ವಿನೂತನ ರೀತಿಯಲ್ಲಿ ಸ್ವಾಂತ್ರತ್ರೋತ್ಸವವನ್ನು ಆಚರಿಸಿಕೊಂಡರು.


ವೆಂಕಟೇಶ್ವರ ಯುವಕ ಮಂಡಳದ ಸದಸ್ಯರು ತಮ್ಮ ಕೈಯಲ್ಲಿ ಕುಡುಗೋಲು ಹಾಗೂ ಗುದ್ದಲಿಯನ್ನು 
ಹಿಡಿದುಕೊಂಡು ನಗರದ ಆಸರಕೇರಿಯ ವಿ.ಟಿ.ರಸ್ತೆ ಹಾಗೂ ಗುರುಮಠ  ಶ್ರೀ ವೆಂಕಟೇಶ್ವರ ದೇವಸ್ತಾನದ  ಆವರಣದಲಿದ್ದ ಕಸ ಗುಂಟೆಗಳನ್ನು  ಸ್ವಚ್ಚಗೊಳಿಸಿ ರಸ್ತೆಬದಿಯಲ್ಲಿದ್ದ ಮನೆಯವರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ  ಗ್ರಾಮದ ಪ್ರಮುಖರಾದ   ಶ್ರೀಧರ ನಾಯ್ಕ ಮಾತನಾಡಿ ಪ್ರತಿವರ್ಷ ನಮ್ಮ ಯುವಕ ಸಂಘದ ಅಡಿಯಲ್ಲಿ ಯುವಕರು ಹಾಗೂ ಗ್ರಾಮಸ್ಥರು ಸೇರಿ ಪ್ರತಿವರ್ಷವೂ  ಸ್ವಾತಂತ್ರೋತ್ಸವ ದಿನದಂದು  ಹಿಂದೂ ರುಧ್ರಭೂಮಿ ಸ್ವಚ್ಚತೆ ದೇವಸ್ಥಾನದ ಆವರಣ ಸ್ವಚ್ಚತೆ  ಸೇರಿದಂತೆ ಹಲವು  ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು  ಬರುತ್ತಿದ್ದೇವೆ.   ಇಂದೂ ಸಹ  ಆಸರಕೇರಿ ವಾರ್ಡನ ಸ್ವಚ್ಚತೆ ಮಾಡಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದ್ದೇವೆ. ನಮ್ಮ ಪರಿಸರ ಸ್ವಚ್ಚತೆ ಇದ್ದಲ್ಲಿ ಯಾವ ರೋಗ ರುಜಿನಗಳು ನಮ್ಮ ಬಳಿ ಬಾರದು ಎಂಬ ಸಂದೇಶವನ್ನು ಇತರರಿಗೆ ನೀಡಿದ್ದೇವೆ ಎಂದರು. ಈ ಸಂದರ್ಭಲ್ಲಿ ಊರ ಪ್ರಮುಖರಾದ ಕೃಷ್ಣಾ ನಾಯ್ಕ, ಪುರಸಭಾ ಸದಸ್ಯ ವೆಂಕಟೇಶ ನಾಯ್ಕ,  ಯುವಕ ಮಂಡಳದ ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಮಂಜುನಾಥ ನಾಯ್ಕ,(ಕೆಮೆನ್)ಮಹಾದೇವ ನಾಯ್ಕ, ಈಶ್ವರ ನಾಯ್ಕ, ಗಣೇಶ ನಾಯ್ಕ, ಶ್ರೀಧರ ನಾಯ್ಕ,ಶ್ರೀನಿವಾಸ ನಾಯ್ಕ, ಮೋಹನ ನಾಯ್ಕ ಸೇರಿದಂತೆ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...